ಕೊಡಗು | ಕಾಫಿ ಕಳವು ಪ್ರಕರಣ; ನಾಲ್ವರ ಬಂಧನ

Date:

Advertisements

ಕೊಡಗು ಜಿಲ್ಲೆ,ವಿರಾಜಪೇಟೆ ತಾಲ್ಲೂಕು,ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ತೋಟಗಳಲ್ಲಿ ಕಾಫಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಭಂದಿಸಿದ ನಾಲ್ವರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಿನಾಂಕ 16-01-2025 ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಂಗಾಲ ಹುಂಡಿಯ ನಿವಾಸಿ ಸಜಿ ಥೋಮಸ್ ರವರ ತೋಟದ ಕಣದಲ್ಲಿ ಒಣಗಿಸಲಿಟ್ಟಿದ್ದ 12 ಚೀಲ ಹಸಿ ಕಾಫಿ ಮತ್ತು 26-02-2025 ರಲ್ಲಿ ಹುಸೇನ್ ರವರ ತೋಟದಲ್ಲಿ 800 ಕೆಜಿ ಕಾಫಿಯನ್ನು ಕಳ್ಳತನ ಮಾಡಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣಗಳು ದಾಖಲಾಗಿದ್ದವು.

ತಿತಿಮತಿ ಗ್ರಾಮದ ಶಾಂತಿನಗರದ ಕೆ ಬಿ ಶಫೀಕ್ (26), ಟಿ ಜೆ ಥೋಮಸ್ (29) ನೊಕ್ಯ ಗ್ರಾಮದ ಎಂ ಜಿ ಅನೀಸ್ (24), ಪೊನ್ನಪ್ಪ ಸಂತೆಯ ಎಂ ಬಿ ಯಾಸಿನ್ (28) ಬಂಧಿತ ಆರೋಪಿಗಳಾಗಿದ್ದಾರೆ.

Advertisements

51 ಚೀಲ ಕಾಫಿ (2550 ಕೆಜಿ), ಒಂದು ಪಿಕ್ ಅಪ್ ವಾಹನ, ಒಂದು ಮಾರುತಿ 800 ಕಾರು ಹಾಗೂ ಒಂದು ಮೋಟಾರ್ ಬೈಕ್ ನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಮಡಿಕೇರಿ ಪೊಲೀಸ್ ಉಪ ವಿಭಾಗದ ಡಿಎಸ್ಪಿ ಪಿ ಎ ಸೂರಜ್, ವೃತ್ತ ನಿರೀಕ್ಷಕ ಪಿ ಕೆ ರಾಜು, ಸಬ್ ಇನ್ಸ್ಪೆಕ್ಟರ್ ಗಳಾದ ರಾಘವೇಂದ್ರ ಮತ್ತು ಹೆಚ್ ಟಿ ಶಿವಣ್ಣ , ಸಿದ್ದಾಪುರ ಪೊಲೀಸ್ ಠಾಣೆಯ ಸಿಬ್ಬಂದಿಗಳು, ಡಿಸಿಆರ್ಬಿ ಘಟಕದ ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು, ಮಾಹಿತಿ ಸಂಗ್ರಹಿಸಿ, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X