ಕೊಡಗು | ಗೋಣಿಕೊಪ್ಪಲಿನಲ್ಲಿ ದಿಢೀರ್ ಕುಸಿತಗೊಂಡ ಹೋಟೆಲ್ ಕಟ್ಟಡ; ಹಲವರಿಗೆ ಗಾಯ

Date:

ಕೊಡಗು ಜಿಲ್ಲೆಯ ಗೋಣಿಕೊಪ್ಪಲ್‌ನಲ್ಲಿ ಹೋಟೆಲ್‌ ಇದ್ದ ಕಟ್ಟಡವೊಂದು ದಿಢೀರನೆ ಕುಸಿತಗೊಂಡ ಘಟನೆ ಗುರುವಾರ(ಜೂನ್ 20) ಮಧ್ಯಾಹ್ನದ ವೇಳೆ ನಡೆದಿರುವುದಾಗಿ ವರದಿಯಾಗಿದೆ.

- Advertisement -

ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಧಮ್ ಬಿರಿಯಾನಿ ಹೋಟೆಲ್ ಇದ್ದ ಕಟ್ಟಡ ಇಂದು ದಿಢೀರನೆ ಕುಸಿದು ಬಿದ್ದು ಹೋಟೆಲ್‌ನಲ್ಲಿದ್ದ ಕಾರ್ಮಿಕರು, ಊಟಕ್ಕೆ ತೆರಳಿದ್ದ ಗ್ರಾಹಕರು ಸಿಲುಕಿಕೊಂಡ ಘಟನೆ ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸರು ಧಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದಲ್ಲಿ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್ ಮತ್ತೊಂದರಲ್ಲಿ ಮಟನ್ ಸ್ಟಾಲ್ ಅಂಗಡಿ ಇತ್ತು. ಇದೀಗ ಕಟ್ಟಡ ಸಂಪೂರ್ಣವಾಗಿ ನೆಲಸಮಗೊಂಡಿದೆ. ಕಟ್ಟಡ ಕುಸಿತಗೊಂಡ ಬೆನ್ನಲ್ಲೇ ಸ್ಥಳೀಯರು ಕಾರ್ಯ ಪ್ರವೃತ್ತರಾಗಿ ಸಿಲುಕಿದ್ದವರನ್ನು ರಕ್ಷಿಸಲು ಯತ್ನಿಸಿದ್ದಾರೆ.

ಘಟನೆಯ ವೇಳೆ ಹೋಟೆಲ್‌ನಲ್ಲಿ ಗ್ರಾಹಕರ ಸಹಿತ ಸುಮಾರು 7ರಿಂದ 10 ಮಂದಿ ಕಟ್ಟಡದ ಒಳಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಗೋಣಿಕೊಪ್ಪಲು ಅಗ್ನಿಶಾಮಕ ದಳದ ಸಿಬ್ಬಂದಿಗಳು, ಕಾರ್ಯಾಚರಣೆ ಸಿಲುಕಿಕೊಂಡವರಲ್ಲಿ ಮೂವರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಇನ್ನೂ ಕೆಲವರು ಕಟ್ಟಡದ ಅಡಿ ಸಿಲುಕಿರುವ ಸಾಧ್ಯತೆ ಇದ್ದು, ಜೆಸಿಬಿ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವಲ್ಲಿ ನಿರತರಾಗಿದ್ದಾರೆ. ಕಾರ್ಯಾಚರಣೆ ಭರದಿಂದ ಸಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಕಟ್ಟಡ ಬೀಳುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಸಿತಗೊಂಡ ಕಟ್ಟಡದ ಎದುರು ಬದಿಯಲ್ಲಿದ್ದ ಕಟ್ಟಡವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಕಟ್ಟಡ ಬೀಳುತ್ತಿರುವ ದೃಶ್ಯವು ಸೆರೆಯಾಗಿದೆ.

ಕಟ್ಟಡ ಕುಸಿಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಕೆಲವರು ಪ್ರಾಣ ಉಳಿಸಿಕೊಳ್ಳಲು ಓಡುತ್ತಿದ್ದ ದೃಶ್ಯ ಸೆರೆಯಾಗಿದೆ. ಘಟನೆಯಿಂದಾಗಿ ಕಟ್ಟಡದ ಸಮೀಪ ನಿಲ್ಲಿಸಿದ್ದ ಕೆಲವು ವಾಹನಗಳು ಕೂಡ ಜಖಂ ಆಗಿದೆ.

ಗೋಣಿಕೊಪ್ಪಲು ನಗರ ಪ್ರವೇಶಿಸಲು ವಿರಾಜಪೇಟೆಯಿಂದ ಬರುವ ವಾಹನಗಳು ಹೆಚ್ ಟಿ ಪೆಟ್ರೋಲ್ ಬಂಕ್ ಮುಖಾಂತರ ಬೈಪಾಸ್ ರಸ್ತೆ ಸಂಚಾರ ಮಾಡಿ, ಮೈಸೂರು ಹಾಗೂ ಪಾಲಿಬೆಟ್ಟ ರಸ್ತೆಯಿಂದ ಬರುವ ವಾಹನಗಳು ಪೊನ್ನಂಪೇಟೆ ಜಂಕ್ಷನ್ ಗಾಗಿ ಬೈಪಾಸ್ ರಸ್ತೆ ಮುಖಾಂತರ ಸಂಚರಿಸುವಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

gani

Gonikoppla

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...