ಮಡಿಕೇರಿ | ಕೊಡಗು ಅಭಿವೃದ್ಧಿ ಸಮಿತಿಯಿಂದ ಅನಧಿಕೃತ ಅಂಗಡಿಗಳ ತೆರವುಗೊಳಿಸುವಂತೆ ಮನವಿ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿ ನಗರ ಬಸ್ ಡಿಪೋದಿಂದ ಕೆಲವೇ ಅಂತರದಲ್ಲಿರುವ, ಅಂದರೆ ಬ್ಲಾಕ್ ನಂಬರ್ 16, ಸರ್ವೆ ನಂಬರ್ 53/6 ರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಕೊಡಗು ಅಭಿವೃದ್ಧಿ ಸಮಿತಿ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರಿಗೆ ಮನವಿ ಸಲ್ಲಿಸಿದೆ.

ಸದರಿ ಜಾಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಲು ಮಾಹಿತಿ ನೀಡಿದ್ದರೂ ಕೂಡ ಸುಮಾರು 10ಕ್ಕೂ ಹೆಚ್ಚು ಅಂಗಡಿಗಳನ್ನು ನಿರ್ಮಾಣ ಮಾಡಿಕೊಂಡು, ರಸ್ತೆಯನ್ನು ಒತ್ತುವರಿ ಮಾಡಿಕೊಂಡು, ಪರವಾನಗಿ ತೆಗೆದುಕೊಳ್ಳದೆ ವ್ಯಾಪಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಗರಸಭೆ ಸದಸ್ಯರಿಂದ ಹಿಡಿದು, ಸಮಾಜದಲ್ಲಿ ಗಣ್ಯ ವ್ಯಕ್ತಿಗಳು ಎನಿಸಿಕೊಂಡಿರುವವರ ಬೇನಾಮಿ ಹೆಸರಿನಲ್ಲಿ ಇರುವ ಆಸ್ತಿಯನ್ನು, ಈ ರೀತಿಯಾಗಿ ನಗರಸಭೆಗೆ ಮೋಸ ಮಾಡಿ, ನಗರಸಭೆಯಿಂದ ಪರವಾನಗಿ ಪಡೆಯದೆ, ವ್ಯವಹಾರಗಳನ್ನು ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಜನ ಸಾಮಾನ್ಯರಿಗೆ ಒಂದು ನ್ಯಾಯ, ಬಡವನಿಗೆ ಒಂದು ನ್ಯಾಯ ಆಗಿದೆ. ಈ ನಗರಸಭೆ ಆಡಳಿತದಲ್ಲಿ ಬೇಲಿಯೇ ಎದ್ದು ಹೊಲವನ್ನು ಮೇಯುವಂತಿದೆ. ಆದುದರಿಂದ, ಕೊಡಗು ಅಭಿವೃದ್ದಿ ಸಮಿತಿಯಿಂದ ಮನವಿ ಸಲ್ಲಿಸುತ್ತಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಇಂತಹ ಅನಧಿಕೃತ ಶೆಡ್‌ಗಳಿಗೆ ಪರವಾನಗಿ ಇದಿಯಾ?, ಕಾನೂನಿನ ಪ್ರಕಾರ ಈ ಶೆಡ್‌ಗಳನ್ನು ನಿರ್ಮಾಣ ಮಾಡಿದ್ದಾರಾ? ಪರಿಶೀಲನೆ ಮಾಡಿ, ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಳ್ಳೆಗಾಲ | ಆನ್ಲೈನ್ ಸಾಲದ ಆಪ್ ನಿಂದ ವಂಚನೆ; ಯುವಕನ ಅಸಹಜ ಸಾವು

ಮನವಿ ಸಲ್ಲಿಸುವಾಗ ಕಾವೇರಪ್ಪ,ಲೀಲಾ ಶೇಷಮ್ಮ, ಪ್ರಮೋದ್, ಸಂದೀಪ್ ಹಾಗೂ ಪ್ರಸನ್ನ ಭಟ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X