ಕೊಡಗು | ಡ್ರಾಪ್ ಕೇಳಿದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

Date:

Advertisements

ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜುಲೈ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಡ್ರಾಪ್ ಕೇಳಿದ ಅಪ್ರಾಪ್ತ ಬಾಲಕಿ‌ ಮೇಲೆ ತಮ್ಮ‌ ಜೊತೆಯಲ್ಲಿ‌ ಬಂದಿದ್ದ ಯುವಕರೇ ಅತ್ಯಾಚಾರ ನಡೆಸಿದ್ದಾರೆಂದು ತಿಳಿದುಬಂದಿದ್ದು, ಅತ್ಯಾಚಾರ ನಡೆಸಿದ ಐವರು ಆರೋಪಿಗಳನ್ನು ಕುಟ್ಟ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಾಥಂಗಾಲ ನಿವಾಸಿಗಳಾದ ನವೀಂದ್ರ (24), ಅಕ್ಷಯ್ (27), ಕೇರಳದ ತೋಳಪಟ್ಟಿಯ ನಾಡುಂಡನ ಕಾಲೋನಿಯ ರಾಹುಲ್ (21), ಮನು (25) ಮತ್ತು ಸಂದೀಪ್ (27) ಎಂದು ಗುರುತಿಸಲಾಗಿದೆ.

Advertisements

ಘಟನೆ ಹಿನ್ನಲೆ

ಕುಟ್ಟದಿಂದ ನಾಗರಹೊಳೆ ಕಡೆಗೆ ಹೋಗುವ ಮಾರ್ಗದಲ್ಲಿ ಜುಲೈ 9ರಂದು ಇಬ್ಬರು ಅಪ್ರಾಪ್ತೆಯರು ಹಾಗೂ ಮೂರು ಮಂದಿ ಯುವಕರು ತೆರಳುತ್ತಿದ್ದರು. ಈ ವೇಳೆ ಕುಟ್ಟ ಕಡೆಯಿಂದ ಬರುತ್ತಿದ್ದ ಕಾರನ್ನು ತಡೆದು ಕಾರಿನಲ್ಲಿದ್ದ ಇಬ್ಬರು ಅಪರಿಚಿತರೊಂದಿಗೆ ತಮ್ಮನ್ನು ನಾಗರಹೊಳೆ ಕಡೆ ಬಿಡುವಂತೆ ಬಾಲಕಿಯರು ಕೇಳಿದ್ದರು. ಹೀಗಾಗಿ ಕಾರಿನಲ್ಲಿ ಇಬ್ಬರು ಅಪ್ರಾಪ್ತೆಯರು ಮತ್ತು ಮೂರು ಮಂದಿ ಯುವಕರು ಪ್ರಯಾಣಿಸಿದ್ದರು.

ಮಾರುತಿ 800 ಕಾರಿನಲ್ಲಿ ಬಾಲಕಿಯರು ನಾಗರಹೊಳೆ ಕಡೆ ತೆರಳಿದ್ದು, ದಾರಿ ಮಧ್ಯೆ ಕಾಫಿ ತೋಟದಲ್ಲಿ ಅಪರಿಚಿತರಾದ ನವೀಂದ್ರ, ಅಕ್ಷಯ್ ಎಂಬುವವರಿಂದ ಓರ್ವ ಬಾಲಕಿ ಮೇಲೆ  ಅತ್ಯಾಚಾರ ನಡೆದಿದೆ. ಅಪ್ರಾಪ್ತೆಯರ ಜತೆಯಲ್ಲೇ ಇದ್ದ ರಾಹುಲ್, ಮನು, ಸಂದೀಪ್ ಎಂಬುವವರು ಮತ್ತೋರ್ವ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತ; ಪ್ರಕರಣ ದಾಖಲಿಸಲು ಎಸ್ಎಫ್ಐ‌ ಒತ್ತಾಯ

ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಎಸ್‌ಪಿ ರಾಮರಾಜನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X