ಕೊಡಗು | ನಿಧಿ ಆಸೆಗೆ ಮನೆಯ ಕೋಣೆಯಲ್ಲೇ ಗುಂಡಿ ಕೊರೆದ ದುರುಳರು ಪೊಲೀಸರ ಬಲೆಗೆ

Date:

Advertisements

ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಇದೀಗ ಸೆರೆಮನೆ ಸೇರಿದ ಆರೋಪಿಯಾಗಿದ್ದಾನೆ.

ಈತನ ಮನೆಯಲ್ಲಿ ಪ್ರತಿನಿತ್ಯ ನಾಗರಹಾವು ಕಾಣಿಸಿಕೊಳ್ಳುತ್ತಿದ್ದು ಈ ವಿಚಾರವನ್ನು ತನ್ನ ಸ್ನೇಹಿತನಾದ ಮೂರ್ನಾಡ್‌ನ ಅತೀಕ್ ಎಂಬಾತನ ಬಳಿ ಹೇಳಿದ್ದಾನೆ. ಆತ ಕಾಸರಗೋಡು ಜಿಲ್ಲೆಯಿಂದ ಓರ್ವ ಮಂತ್ರವಾದಿಯನ್ನು ಕರೆಸಿದ್ದಾನೆ. ಮಂತ್ರವಾದಿ ಮನೆಯ ಮೂರನೇ ಕೋಣೆಯಲ್ಲಿ ನಿಧಿ ಇರುವುದಾಗಿ ಯಂತ್ರದ ಪರಿಶೋಧನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾನೆ. ಕೋಣೆಯಲ್ಲಿ ಗುಂಡಿ ತೋಡಲು ಶುರು ಮಾಡಿ, ಯಂತ್ರದಲ್ಲಿ ಪರಿಶೀಲನೆ ಮಾಡಿದಾಗ ನಿಧಿ ಇರುವ ಯಾವುದೇ ಶಬ್ದ ಬಾರದ ಹಿನ್ನೆಲೆಯಲ್ಲಿ ಅವರು ತೆರಳಿದ್ದಾರೆ.

Advertisements

ತದನಂತರ ಆಸೀಫ್ ವಿಚಾರವನ್ನು ಕುಶಾಲನಗರದ ಆರೀಫ್ ಮತ್ತು ಮಡಿಕೇರಿಯ ಫಾಹೀದ್ ಎಂಬುವವರ ಬಳಿ ಹೇಳಿದ ಹಿನ್ನೆಲೆಯಲ್ಲಿ ಮಾಟಮಂತ್ರ ಮಾಡಿಸಿದರೆ ನಿಧಿ ಸಿಗಲಿದೆ ಎಂದು ಅವರನ್ನು ನಂಬಿಸಿದ್ದಾನೆ.

ಮಾಟಮಂತ್ರ ಮಾಡಿಸಲೆಂದು ತಮಿಳುನಾಡಿನಿಂದ ಕರ್ಪಸ್ವಾಮಿ ಎಂಬ ಮಾಂತ್ರಿಕನನ್ನು ಹಾಗೂ ಆತನೊಂದಿಗೆ ಮೂವರನ್ನು ಕರೆಸಿದ್ದಾನೆ. ನಿರಂತರವಾಗಿ 35 ದಿನಗಳ ಕಾಲ ಪೂಜೆ ನೆರವೇರಿಸಿ ನಂತರ ಕೋಳಿ ಬಲಿ ನೀಡಿದರೆ ನಿಧಿ ಸಿಗಲಿದೆ ಎಂದು ಮಾಂತ್ರಿಕ ಹೇಳಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಪೂಜೆ ನೆರವೇರಿಸಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಕೋಣೆಯಲ್ಲಿ ಗುಂಡಿ ತೋಡಿರುವುದು ಹಾಗೂ ಪೂಜೆ ನಡೆಸಿರುವುದು ಪತ್ತೆಯಾಗಿದೆ. ಆಸಿಫ್‌ನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ನಿಧಿಯ ಆಸೆಗೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ.

ಇದನ್ನು ಓದಿದ್ದೀರಾ? ಸೀಳು ಮಾತಿನಿಂದ ಸ್ಪಷ್ಟ ಮಾತಿನೆಡೆಗೆ

ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ಎಸಗಿದ ಪ್ರಕರಣದಲ್ಲಿ ಭಾಗಿಯಾದ 6 ಮಂದಿಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ವಾಮಾಚಾರ ಇವುಗಳ ಪ್ರತಿಬಂಧಕ ಮತ್ತು ನಿರ್ಮೂಲನೆ ಅಧಿನಿಯಮ 2017ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X