ಕೊಡಗು | ನಿಧಿ ಆಸೆಗೆ ಮನೆಯ ಕೋಣೆಯಲ್ಲೇ ಗುಂಡಿ ಕೊರೆದ ದುರುಳರು ಪೊಲೀಸರ ಬಲೆಗೆ

Date:

ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಇದೀಗ ಸೆರೆಮನೆ ಸೇರಿದ ಆರೋಪಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈತನ ಮನೆಯಲ್ಲಿ ಪ್ರತಿನಿತ್ಯ ನಾಗರಹಾವು ಕಾಣಿಸಿಕೊಳ್ಳುತ್ತಿದ್ದು ಈ ವಿಚಾರವನ್ನು ತನ್ನ ಸ್ನೇಹಿತನಾದ ಮೂರ್ನಾಡ್‌ನ ಅತೀಕ್ ಎಂಬಾತನ ಬಳಿ ಹೇಳಿದ್ದಾನೆ. ಆತ ಕಾಸರಗೋಡು ಜಿಲ್ಲೆಯಿಂದ ಓರ್ವ ಮಂತ್ರವಾದಿಯನ್ನು ಕರೆಸಿದ್ದಾನೆ. ಮಂತ್ರವಾದಿ ಮನೆಯ ಮೂರನೇ ಕೋಣೆಯಲ್ಲಿ ನಿಧಿ ಇರುವುದಾಗಿ ಯಂತ್ರದ ಪರಿಶೋಧನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾನೆ. ಕೋಣೆಯಲ್ಲಿ ಗುಂಡಿ ತೋಡಲು ಶುರು ಮಾಡಿ, ಯಂತ್ರದಲ್ಲಿ ಪರಿಶೀಲನೆ ಮಾಡಿದಾಗ ನಿಧಿ ಇರುವ ಯಾವುದೇ ಶಬ್ದ ಬಾರದ ಹಿನ್ನೆಲೆಯಲ್ಲಿ ಅವರು ತೆರಳಿದ್ದಾರೆ.

ತದನಂತರ ಆಸೀಫ್ ವಿಚಾರವನ್ನು ಕುಶಾಲನಗರದ ಆರೀಫ್ ಮತ್ತು ಮಡಿಕೇರಿಯ ಫಾಹೀದ್ ಎಂಬುವವರ ಬಳಿ ಹೇಳಿದ ಹಿನ್ನೆಲೆಯಲ್ಲಿ ಮಾಟಮಂತ್ರ ಮಾಡಿಸಿದರೆ ನಿಧಿ ಸಿಗಲಿದೆ ಎಂದು ಅವರನ್ನು ನಂಬಿಸಿದ್ದಾನೆ.

ಮಾಟಮಂತ್ರ ಮಾಡಿಸಲೆಂದು ತಮಿಳುನಾಡಿನಿಂದ ಕರ್ಪಸ್ವಾಮಿ ಎಂಬ ಮಾಂತ್ರಿಕನನ್ನು ಹಾಗೂ ಆತನೊಂದಿಗೆ ಮೂವರನ್ನು ಕರೆಸಿದ್ದಾನೆ. ನಿರಂತರವಾಗಿ 35 ದಿನಗಳ ಕಾಲ ಪೂಜೆ ನೆರವೇರಿಸಿ ನಂತರ ಕೋಳಿ ಬಲಿ ನೀಡಿದರೆ ನಿಧಿ ಸಿಗಲಿದೆ ಎಂದು ಮಾಂತ್ರಿಕ ಹೇಳಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಪೂಜೆ ನೆರವೇರಿಸಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಕೋಣೆಯಲ್ಲಿ ಗುಂಡಿ ತೋಡಿರುವುದು ಹಾಗೂ ಪೂಜೆ ನಡೆಸಿರುವುದು ಪತ್ತೆಯಾಗಿದೆ. ಆಸಿಫ್‌ನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ನಿಧಿಯ ಆಸೆಗೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ.

ಇದನ್ನು ಓದಿದ್ದೀರಾ? ಸೀಳು ಮಾತಿನಿಂದ ಸ್ಪಷ್ಟ ಮಾತಿನೆಡೆಗೆ

ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ಎಸಗಿದ ಪ್ರಕರಣದಲ್ಲಿ ಭಾಗಿಯಾದ 6 ಮಂದಿಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ವಾಮಾಚಾರ ಇವುಗಳ ಪ್ರತಿಬಂಧಕ ಮತ್ತು ನಿರ್ಮೂಲನೆ ಅಧಿನಿಯಮ 2017ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...