ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

Date:

Advertisements

ಕೊಡಗು ಜಿಲ್ಲೆ,ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿ, ಕರ್ನಾಟಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ದಿನಾಂಕ 28-03-2025 ರಂದು ಮಧ್ಯಾಹ್ನ ಸುಮಾರು 01.30 ಗಂಟೆಗೆ ಬೇಗೂರು ಗ್ರಾಮ ಬಾಳಂಗಾಡು ಪ್ರದೇಶದ ಒಂಟಿ ಮನೆಯಲ್ಲಿ ನಾಲ್ಕು ಜನರ ಕೊಲೆಯಾಗಿರುವ ಕುರಿತು ಮಾಹಿತಿ ಬಂದಿದ್ದು, ಸದರಿ ಘಟನೆ ಸ್ಥಳಕ್ಕೆ ಮೈಸೂರಿನ ದಕ್ಷಿಣ ವಲಯ ಐಜಿಪಿ ಡಾ ಎಂ ಬಿ ಬೋರಲಿಂಗಯ್ಯ, ಪೊಲೀಸ್ ಅಧೀಕ್ಷಕ ಕೆ ರಾಮರಾಜನ್,ಅಪರ ಪೊಲೀಸ್ ಅಧೀಕ್ಷಕ ಸುಂದರ್ ರಾಜ್, ಡಿಎಸ್‌ಪಿ ಮಹೇಶ್ ಕುಮಾರ್ ವಿರಾಜಪೇಟೆ ಉಪವಿಭಾಗ, ಶಿವರಾಜ್ ಮುಧೋಳ್ ಸಿಪಿಐ ಗೋಣಿಕೊಪ್ಪ ವೃತ್ತ, ನವೀನ್ ಪಿಎಸ್‌ಐ ಪೊನ್ನಂಪೇಟೆ ಪೊಲೀಸ್ ಠಾಣೆ ಮತ್ತು ಅಪರಾಧ ಪತ್ತೆ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯದ ಕುರಿತು ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದರು.

ದೂರುದಾರರು ನೀಡಿದ ಮಾಹಿತಿ ಅನ್ವಯ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಡಿಎಸ್‌ಪಿ, ವಿರಾಜಪೇಟೆ ಉಪ ವಿಭಾಗ ರವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

Advertisements

ಬೇಗೂರು ಗ್ರಾಮ ಬಾಳಂಗಾಡು ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಕರಿಯ (75), ಗೌರಿ (70), ನಾಗಿ (30) , ಮತ್ತು ಕಾವೇರಿ ( 6) ವರ್ಷ ಹಾಗೂ ಗಿರೀಶ್ (38) ಒಂಟಿ ಮನೆಯಲ್ಲಿ ವಾಸವಿದ್ದು, ಆರೋಪಿ ನಾಗಿಯ ಮೂರನೇ ಗಂಡನಾಗಿದ್ದು ಒಂದು ವರ್ಷದಿಂದ ಒಟ್ಟಿಗೆ ವಾಸವಿದ್ದರು.

ನಾಗಿಯ ಎರಡನೇ ಗಂಡನಾದ ಸುಬ್ರಮಣಿಯೊಂದಿಗೆ ಮತ್ತೆ ಸಂಬಂಧವಿರುವ ಬಗ್ಗೆ ಸಂಶಯದಿಂದ ಆರೋಪಿ ಗಿರೀಶ ದಿ 27-03-2025 ರಂದು ರಾತ್ರಿ ಸಮಯದಲ್ಲಿ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ತಲೆ ಮರೆಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿರುತ್ತದೆ.

ಆರೋಪಿಯನ್ನು ಕೇರಳ ರಾಜ್ಯದ ವೈನಾಡು ಜಿಲ್ಲೆಯ ತಾಲಪೋಯ ಪೊಲೀಸ್ ಠಾಣೆಯ ಎಎಸ್ಐಟಿ ಅನೀಶ್, ವಿಶೇಷ ಶಾಖೆಯ ಠಾಣಾಧಿಕಾರಿ ಜಿ ಅನಿಲ್, ಸಿಬ್ಬಂದಿ ಶಫೀರ್ ಆರೋಪಿಯನ್ನು ಬಂಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ

ಆರೋಪಿ ಮೂಲತಃ ಕೇರಳವಾದವನಾಗಿದ್ದು. ವೈನಾಡು ಜಿಲ್ಲೆಯ ತಿರುನಲ್ಲಿ ಬಳಿಯ ಉಣಿತು ಪರಂಬು ಗ್ರಾಮದವನಾಗಿದ್ದಾನೆ. ಕೂಲಿ ಕೆಲಸಕ್ಕಾಗಿ ಇಡೀ ಕುಟುಂಬ ವಲಸೆ ಬಂದು ಕೊಡಗಿನ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದಲ್ಲಿ ನೆಲೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X