ಶೀತ‚ ಕೆಮ್ಮು‚ ನೆಗಡಿ‚ ಜ್ವರ, ಹೊಟ್ಟೆಗೆ ಸಂಬಂಧಿತ ಹಾಗೂ ಹೃದಯ ಸಂಬಂಧಿ ಖಾಯಿಲೆ, ರಕ್ತದೊತ್ತಡ‚ ಮಧುಮೇಹ, ಮೂಳೆಗೆ ಸಂಬಂಧಿಸಿದ ಎಲ್ಲ ತರಹದ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ ಎಂದು ಕೊಡಗು ಪ್ರೆಸ್ಕ್ಲಬ್ ತಿಳಿಸಿದೆ.
ಕೊಡಗು ಪ್ರೆಸ್ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡಗು ಪ್ರೆಸ್ ಕ್ಲಬ್ ಆರೋಗ್ಯ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಇಯರಿಂಗ್ ಸ್ಪೀಚ್ ಇಂಪ್ಲಾಂಟ್ ಕ್ಲಿನಿಕ್, ಶ್ರೀದೇವಿ ಮೆಡಿಕಲ್ ಸೆಂಟರ್ ಹಾಗೂ ಆಸ್ಪತ್ರೆ ಮೂರ್ನಾಡು ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಭಿವೃದ್ಧಿ ಹೆಸರಿನಲ್ಲಿ ಮರಗಳಿಗೆ ಕೊಡಲಿ; ವಿರೋಧ
ಮೇ 27ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಮೂರ್ನಾಡಿನ ಶ್ರೀದೇವಿ ಮೆಡಿಕಲ್ ಸೆಂಟರ್ ಹಾಗೂ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದ್ದು, ಕಿವಿ, ಮೂಗು, ಗಂಟಲು ಮತ್ತು ಚರ್ಮ ರೋಗಗಳಿಗೆ ಸಂಬಂಧಿಸಿದಂತೆ ಆಯುರ್ವೇದ ಹಾಗೂ ಅಲೋಪತಿ ಚಿಕಿತ್ಸಾ ವಿಧಾನಗಳ ಮೂಲಕ ಉಚಿತ ತಪಾಸಣೆ, ಚಿಕಿತ್ಸೆ ನೀಡಲಾಗುತ್ತದೆ ಎಂದು ಪ್ರಕಟಣೆಗೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಧ್ಯಾ ಬೋಪಣ್ಣ ಅವರನ್ನು ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ 8197529036 ಕ್ಕೆ ಕರೆ ಮಾಡಬಹುದು.