ಕೊಡಗು | ಹಾವು ಕಚ್ಚಿದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ

Date:

ಹಾವು ಕಚ್ಚಿದ ಬಳಿಕ 24 ಗಂಟೆಯೊಳಗೆ ರೋಗಿಯ ಮೇಲೆ ವಿಶೇಷವಾಗಿ ನಿಗಾ ವಹಿಸುವುದು ಮುಖ್ಯವಾಗಿದೆ ಎಂದು ನರ ವಿಜ್ಞಾನಿ ಡಾ. ಅಮೀರ್‌ಮೊಯಿನ್ ಹೇಳಿದ್ದಾರೆ.

- Advertisement -

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲೋಪಮುದ್ರ ಮೆಡಿಕಲ್ ಸೆಂಟರ್ ಸಹಯೋಗದಲ್ಲಿ ʼಹಾವು ಕಡಿತದ ಪರಿಣಾಮಗಳುʼ ವಿಷಯದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ವಿಷಕಾರಿ ಹಾವು ಕಚ್ಚಿದ 24 ಗಂಟೆಯೊಳಗೆ ರೋಗಿಯ ಮೇಲೆ ವಿಶೇಷವಾಗಿ ನಿಗಾ ವಹಿಸುವುದು ಮುಖ್ಯವಾಗಿದೆ. ಚಿಕಿತ್ಸೆ ತಡವಾದಷ್ಟು ಅಪಾಯವೇ ಹೆಚ್ಚು. ಒಂದೊಂದು ಹಾವುಗಳ ಕಡಿತದಿಂದ ಒಂದೊಂದು ರೀತಿಯಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಮೆದುಳು, ನರಗಳ ಮೂಲಕ ವಿಷ ರಕ್ತದೊಂದಿಗೆ ಸಂಚಾರವಾಗುವುದರಿಂದ ಜೀವಕ್ಕೆ ಕಂಠಕವಾಗಲಿದೆ” ಎಂದು ತಿಳಿಸಿದರು.

“ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದ ಸಂದರ್ಭದಲ್ಲಿ ಮೂತ್ರಕೋಶ, ಹೃದಯ, ಮಾಂಸಖಂಡಕ್ಕೂ ವಿಷ ಹರಡಿ ಮತ್ತಷ್ಟು ಸಮಸ್ಯೆಯಗುವ ಸಾಧ್ಯತೆ ಹೆಚ್ಚಿರುತ್ತದೆ. ಕಣ್ಣುರೆಪ್ಪೆ ಭಾಗದಲ್ಲಿ ಊದಿಕೊಳ್ಳುವುದು, ಕಣ್ಣು ಮಂಜಾಗುವುದು, ನಾಲಿಗೆ ಹೊರಗೆ ಹಾಕಲು ತೊಂದರೆ ಪಡುವುದು, ಕುತ್ತಿಗೆ ಭಾಗ ಮೇಲೆತ್ತಲು ಆಗದಿರುವುದು, ಸ್ಟ್ರೋಕ್, ಹೈಪರ್ ಬಿಪಿ ಕೂಡ ಇದರ ಒಂದಷ್ಟು ಲಕ್ಷಣಗಳಾಗಿವೆ. ಇದನ್ನು ಅರಿತುಕೊಂಡು ಭಯದಿಂದ ಹೊರ ಬಂದು ಆಸ್ಪತ್ರೆಗೆ ದಾಖಲಿಸಬೇಕಿದೆ” ಎಂದರು.

ಉರಗ ಸಂರಕ್ಷಕ ಶರತ್‌ಕಾಂತ್ ಮಾತನಾಡಿ, “ನಾಗರಹಾವು, ಕಾಳಿಂಗ ಸರ್ಪ, ಕೊಳಕು ಮಂಡಲ, ಉರಿ ಮಂಡಲ, ಕಟ್ಟುಹಾವು ವಿಷಕಾರಿ ಹಾವುಗಳಾಗಿವೆ. ಕಡಿಮೆ ಸಂಖ್ಯೆಯಲ್ಲಿ ಹಸಿರು ಬಣ್ಣದಿಂದ ಕೂಡಿರುವ ಮಲಬಾರ್ ವೈಪರ್‌ಪಿಟ್ ಕೂಡ ವಿಷಕಾರಿ ಹಾವಾಗಿದ್ದು, ಹೆಚ್ಚಿನ ಜನರು ಕೊಳಕು ಮಂಡಲ ಹಾವು ಕಚ್ಚಿ ಅಪಾಯದಲ್ಲಿ ಸಿಲುಕುವ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ” ಎಂದು ಹೇಳಿದರು.

“ಕೃಷಿಕರು, ಬಡ ವರ್ಗದವರು ಹಾವು ಕಡಿತಕ್ಕೆ ಜೀವ ಕಳೆದುಕೊಳ್ಳುತ್ತಿವುದು ಬೇಸರದ ವಿಚಾರವಾಗಿದೆ. ಹಾವು ಕಚ್ಚಿದಾಗ ಆದಷ್ಟು ಸಮಧಾನದಿಂದ ಇರುವಂತೆ ನೋಡಿಕೊಳ್ಳಬೇಕು. ಭಯ ಹುಟ್ಟಿಸುವುದರಿಂದ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚಿದೆ. ಹಾವು ಯಾವುದೆಂದು ಗುರುತಿಸಿ ವೈದ್ಯರಲ್ಲಿ ಹಂಚಿಕೊಳ್ಳುವುದರಿಂದ ಅಪಾಯ ತಪ್ಪಿಸಲು ಸಾಧ್ಯವಿದೆ” ಎಂದು ತಿಳಿಸಿದರು.

“ಹಾವು ಕಚ್ಚಿದ ಜಾಗದಲ್ಲಿ ಬಿಗಿಯಾಗಿ ಕಟ್ಟುವುದು, ಹಾವಿನ ಪೂರ್ವಪರ ತಿಳಿಯದೆ ಹಿಡಿಯಲು ಹೋಗುವುದು ಕೂಡ ಅಪಾಯವಿದೆ. ಆದಷ್ಟು ಬೇಗ ಆಸ್ಪತ್ರೆಗೆ ಕರೆತರುವುದರಿಂದ ಜೀವ ಉಳಿಸಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.

ಲೋಪಮುದ್ರ ಮೆಡಿಕಲ್ ಸೆಂಟರ್ ವ್ಯವಸ್ಥಾಪಕ ಪಾಲುದಾರ ಡಾ. ಮುಕ್ಕಾಟೀರ ಅಮೃತ್ ನಾಣಯ್ಯ ಮಾತನಾಡಿ, “ಹಾವುಗಳು ಹೆಚ್ಚಾಗಿ ಇಲಿಗಳನ್ನು ತಿನ್ನುವುದರಿಂದ ಕಚ್ಚಿದ ಜಾಗದ ಮೂಲಕ ಬ್ಯಾಕ್ಟೀರಿಯಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ಜಾಗವನ್ನು ಕೊಳೆಯಬಹುದು. ಗ್ಯಾಂಗ್ರಿನ್ ರೋಗ ಕೂಡ ಕಾಣಿಸಿಕೊಳ್ಳಬಹುದು. ಭಯ ಬಿಟ್ಟು ಮೂಡನಂಬಿಕೆಯಿಂದ ಹೊರ ಬಂದು ಚಿಕಿತ್ಸೆ ಪಡೆಯುವುದು ಸೂಕ್ತವಾಗಿದೆ” ಎಂದು ತಿಳಿಸಿದರು.

“ಹಾವುಗಳು ನ್ಯೂರೊ ಟಾಕ್ಸಿನ್ ಮತ್ತು ಹೆಮೋ ಟಾಕ್ಸಿಕ್‌ನಂತಹ ಎರಡು ವಿಧಗಳಲ್ಲಿ ವಿಷ ಕಾರ್ಯನಿರ್ವಹಿಸುತ್ತವೆ. ಇದನ್ನು ಪತ್ತೆ ಹಚ್ಚಲು ಯಾವ ಹಾವು ಕಚ್ಚಿದೆ ಎಂಬುವುದನ್ನು ಪತ್ತೆ ಹಚ್ಚುವುದು ಕೂಡ ಮುಖ್ಯವಾಗಿದೆ. ಇದರಂತೆ ಚಿಕಿತ್ಸೆ ಕೂಡ ನೀಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪೊಲೀಸರಿಂದ ಹಲ್ಲೆ ಆರೋಪ; ನೊಂದ ಯುವಕ ಆತ್ಮಹತ್ಯೆ

ವೈದ್ಯೆ ಡಾ. ರುತ್ ಅದ್ಲಾಕಾ ಮಾತನಾಡಿ, “ಹಾವಿನ ಬಗ್ಗೆ ಮುಂಜಾಗೃತೆ ಅಗತ್ಯ. ಮನೆಯ ಸುತ್ತಲು ಸ್ವಚ್ಚತೆ, ಕಿಟಕಿ ಮೂಲಕ ಹಾವು ನುಗ್ಗದಂತೆ ತಡೆ ಮಾಡುವುದು, ಬೂಟ್ ಹಾಕಿಕೊಳ್ಳುವುದು, ರಾತ್ರಿ ಹೊತ್ತು ಟಾರ್ಚ್ ಬೆಳಕಿನಲ್ಲಿ ಸಂಚರಿಸುವುದು, ಹಾಸಿಗೆ ಸಮೀಪ ಬೆಲ್ ಇಟ್ಟುಕೊಳ್ಳುವುದು ಕೂಡ ಮುಖ್ಯವಾಗಿದೆ. ಕಚ್ಚಿದ ಜಾಗಕ್ಕೆ ಹೆಚ್ಚು ಬಿಗಿಯಾಗಿ ಕಟ್ಟುವುದರಿಂದ ರಕ್ತ ಸಂಚಾರ ಕಡಿಮೆಯಾಗಿ ಜೀವಕ್ಕೂ ಅಪಾಯ ತಂದೊಡ್ಡಲಿದೆ. ಹಾಗಾಗಿ ಕೂಡಲೇ ಅಸ್ಪತ್ರೆಗೆ ಕರೆತರುವುದು ಒಳ್ಳೆಯದು” ಎಂದು ಸಲಹೆ ನೀಡಿದರು.

ಆಸ್ಪತ್ರೆ ಪಾಲುದಾದ ಕ್ಯಾ. ಮುಕ್ಕಾಟೀರ ಎ. ಮಾದಪ್ಪ, ನೇತ್ರ ತಜ್ಞೆ ಡಾ. ಮುಕ್ಕಾಟೀರ ಸೌಮ್ಯ ನಾಣಯ್ಯ, ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...