ಕೊಡಗು | ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ; ರಾಜ್ಯದ ಮೊದಲ ಮಹಿಳಾ ನಿರ್ದೇಶಕರಾಗಿ ಪಿ ಎ ಸೀಮಾ ನೇಮಕ

Date:

Advertisements

ಕರ್ನಾಟಕ ಸರ್ಕಾರದಲ್ಲಿ ಪ್ರತಿಷ್ಠಿತ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಮೊಟ್ಟ ಮೊದಲ ಬಾರಿಗೆ ರಾಜ್ಯದ ಮಹಿಳಾ ನಿರ್ದೇಶಕರಾಗಿ ಪಿ ಎ ಸೀಮಾ ನೇಮಕಗೊಂಡಿದ್ದಾರೆ.

ಕೊಡಗಿನವರಾದ ಪಿ ಎ ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿಸಿಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನವರಾದ ಇವರು ಮೈಸೂರು, ಮಂಡ್ಯ, ಹುಣಸೂರು, ಮಡಿಕೇರಿಯಲ್ಲಿ ಡಿಸಿಎಫ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿಸಿಎಫ್ ಆಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದರೆಂಬ ಪ್ರಶಂಸೆಗೆ ಒಳಗಾಗಿದ್ದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ, ಕರ್ನಾಟಕ ಗಡಿ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿಭಾಗವನ್ನೂ ಕೂಡ ಹೊಂದಿದ್ದು, ಇಲ್ಲಿ ನಿರಂತರ ಕಾಡುಪ್ರಾಣಿಗಳ ಬೇಟೆ, ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ ಎ ಸೀಮಾ ಆಯ್ಕೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ವೃದ್ಧೆಯ ಮನೆ ಕಳ್ಳತನ ; ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ

ಇವರ ಹಿನ್ನಲೆ: ಭಾರತೀಯ ಅರಣ್ಯ ಸೇವೆ(ಐಎಫ್‌ಎಸ್) ಅಧಿಕಾರಿ‌, ಮೂಲತಃ ನಾಪೋಕ್ಲುವಿನ ಪಾಡ್ಯಮಂಡ ಆನಂದ್-ಕಮಲ ದಂಪತಿಯ ಪುತ್ರಿ, ಮತ್ತೂರು ಗ್ರಾಮದ ಪುತ್ತಾಮನೆ ಡಾ ಅಶೋಕ್, ಶಾಂತಿರವರ ಸೊಸೆ, ಪುತ್ತಾಮನೆ ರಂಜನ್ ಪತ್ನಿ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X