ಕೊಡಗು | ಆದಿವಾಸಿಗಳ ಕುರಿತು ವರದಿಗೆ ಬಂದ ಪತ್ರಕರ್ತನನ್ನು ವಶಕ್ಕೆ ಪಡೆದ ಪೊಲೀಸರು

Date:

Advertisements

ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೇರಳದ ಪತ್ರಕರ್ತ ರಿಜಾಸ್ ಅವರು ತಮ್ಮನ್ನು ಪೊಲೀಸರು ವಶಕ್ಕೆ ಪಡೆದಿದ್ದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. “ನಾನು ಆದಿವಾಸಿಗಳ ವಾಸಸ್ಥಳಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಖಾಸಗಿ ಕಾರಿನಲ್ಲಿ ಬಂದ ಮೂವರು ಪೊಲೀಸರು ನಿರ್ಜನ ಪ್ರದೇಶದಲ್ಲಿ ಬಸ್ ನಿಲ್ಲಿಸಿ, ಯಾವುದೇ ವಾರಂಟ್ ಇಲ್ಲದೆ ನನ್ನನ್ನು ವಶಕ್ಕೆ ಪಡೆಯಲು ಬಂದಿದ್ದರು. ಕೆಲವು ನಿಮಿಷ ವಾಗ್ವಾದ ನಡೆದ ಬಳಿಕವೂ ನನ್ನನ್ನು ಅವರ ಕಾರಿನಲ್ಲಿ ಕೂರಿಸಿಕೊಂಡು ವಿರಾಜಪೇಟೆ ಪೊಲೀಸ್‌ ಠಾಣೆಗೆ ಕರೆದೊಯ್ದು, ವಿಚಾರಣೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ವಿಚಾರಣೆಯ ಬಳಿಕ ನನ್ನನ್ನು ಠಾಣೆಯಿಂದ ಕಳಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಅವರು ಇತರ 4 ಅಧಿಕಾರಿಗಳ ಸಮ್ಮುಖದಲ್ಲಿ ನನ್ನನ್ನು ವಿಚಾರಣೆ ನಡೆಸಿದರು. ‘ಅರ್ಬನ್ ನಕ್ಸಲರು ಕೊಚ್ಚಿಯಿಂದ ಕರ್ನಾಟಕಕ್ಕೆ ಬಂದಿದ್ದಾರೆಂಬ ಮಾಹಿತಿ ಇದೆ’ ಎಂದು ಅವರು ಹೇಳಿದರು. ‘ಪ್ರಬಲ ಜಾತಿಯ ಉದ್ಯೋಗದಾತರಿಂದ ಆದಿವಾಸಿ ಕಾರ್ಮಿಕರು ಎದುರಿಸುತ್ತಿರುವ ಹಿಂಸಾಚಾರದ ಬಗ್ಗೆ ವರದಿ ಮಾಡಲು ಬಂದಿದ್ದೇನೆ. ಆದಿವಾಸಿಗಳ ಸಂಕಷ್ಟದ ಬಗ್ಗೆ ಮುಖ್ಯವಾಹಿನಿಯ ಮಾಧ್ಯಮಗಳು ವರದಿ ಮಾಡದ ಕಾರಣ ನಾನು ಸ್ವಯಂಪ್ರೇರಿತನಾಗಿ ವರದಿ ಮಾಡಲು ಬಂದಿದ್ದೇನೆ’ ಎಂದು ನಾನು ಅಧಿಕಾರಿಗಳಿಗೆ ತಿಳಿಸಿದೆ. ನನ್ನ ಮಾತಿಗೆ ಪ್ರಿಕ್ರಿಯಿಸಿದ ಇನ್ಸ್‌ಪೆಕ್ಟರ್ ‘ನಾನು ನಕ್ಸಲ್‌ನಂತೆ ಮಾತನಾಡುತ್ತಿದ್ದೇನೆ’ ಎಂದರು” ಎಂದು ರಿಜಾಸ್ ವಿವರಿಸಿದ್ದಾರೆ.

Advertisements
image 39

“ನನ್ನ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದು ಸಮಸ್ಯೆಯಲ್ಲ. ಆದರೆ, ಆದಿವಾಸಿ ಕಾರ್ಮಿಕರಿಗೆ ಹೊರಗಿನಿಂದ ಯಾರನ್ನೂ ಭೇಟಿಯಾಗಲು ಅವಕಾಶ ನೀಡದೇ ಇರುವುದು ಸಮಸ್ಯೆ” ಎಂದು ಅವರು ಹೇಳಿದ್ದಾರೆ.

ಪತ್ರಕರ್ತ ರಿಜಾಸ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್, “ಹೊರಗಿರನವರು ಯಾರು ಎಂಬುದನ್ನು ತಿಳಿದುಕೊಳ್ಳುವ ಉದ್ದೇಶದಿಂದ ಅವರನ್ನು ವಿಚಾರಣೆಗೆ ಒಳಪಡಿಸಿದ್ದೆವು. ರಿಜಾಸ್ ಮಾಡಿರುವ ಆರೋಪಗಳು ಮತ್ತು ಅವರ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X