ಕೊಡಗು | ದರೋಡೆ ನಡೆಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

Date:

Advertisements

ಮನೆಗೆ ನುಗ್ಗಿ ಚಾಕು ತೋರಿಸಿ, ಬೆದರಿಸಿ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಮನೆಯ ಗಾಡ್ರೇಜ್‌ನಲ್ಲಿದ್ದ ಚಿನಾಭರಣಗಳನ್ನು ದರೋಡೆ ಮಾಡಿದ ಆರೋಪಿಯನ್ನು ಕೊಡಗು ಜಿಲ್ಲಾ ಪೊಲೀಸರು ಪ್ರಕರಣ ದಾಖಲಾದ ಆರು ಗಂಟೆಯಲ್ಲೇ ಬಂಧಿಸಿದ್ದಾರೆ.

ಸಣ್ಣ ಪೂಲಿಕೋಟು ಬಸ್ ನಿಲ್ದಾಣದ ಬಳಿ ಚೇರಂಬಾಣೆ ನಿವಾನಿ ಸುದರ್ಶನ್ (24) ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜೊತೆಗೆ ಕಳವು ಮಾಡಿದ್ದ 60 ಗ್ರಾಂ 530 ಮಿಲಿ ಚಿನ್ನಾಭರಣಗಳನ್ನು ಮತ್ತು ರೂ. 620 ನಗದು ಹಾಗೂ ಕೃತ್ಯಕ್ಕೆ ಬಳಸಿದ ಡ್ರಾಗರ್(ಚಾಕು)ವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ ರಾಮರಾಜನ್, ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂಬಾಣೆ ಗ್ರಾಮದ ನಿವಾಸಿಯಾದ ಗೋಪಾಲಕೃಷ್ಣ.ಕೆ.ಕೆ ಎಂಬುವವರ ಮನೆಗೆ ಆ.22ರಂದು ಬೆಳಗ್ಗೆ ಸುಮಾರು 11.30 ಗಂಟೆ ಸಮಯದಲ್ಲಿ ಮನೆಯಲ್ಲಿ ಗೋಪಾಲಕೃಷ್ಣ.ಕೆ.ಕೆ ರವರ ತಾಯಿ ಒಬ್ಬರೆ ಇರುವ ಸಂದರ್ಭ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಹಲ್ಲೆ ಮಾಡಿದ್ದ. ಬಳಿಕ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಮನೆಯ ಗಾಡ್ರೇಜ್‌ನಲ್ಲಿದ್ದ ಚಿನಾಭರಣಗಳನ್ನು ದರೋಡೆ ಮಾಡಿರುವ ಕುರಿತು ದೂರು ಸ್ವೀಕರಿಸಲಾಗಿತ್ತು. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾದ ಆರು ಗಂಟೆಯಲ್ಲೇ ಬಂಧಿಸಿದ್ದಾರೆ ಎಂದು ತಿಳಿಸಿದರು.

Advertisements

ಪ್ರಕರಣ ಪತ್ತೆ ಹಚ್ಚುವ ಸಲುವಾಗಿ ಮಡಿಕೇರಿ ಉಪವಿಭಾಗ ಡಿ.ಎಸ್.ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಪಿ.ಐ ಅನೂಪ್ ಮಾದಪ್ಪ, ಭಾಗಮಂಡಲ ಪಿಎಸ್‌ಐ ಶೋಭಾ ಲಮಾಣಿ ಸೇರಿದಂತೆ ವಿಶೇಷ ತಂಡವನ್ನು ರಚಿಸಿ ತನಿಖೆಯನ್ನು ಕೈಗೊಳ್ಳಲಾಗಿತ್ತು.

ಇದನ್ನು ಓದಿದ್ದೀರಾ? ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

ಪ್ರಕರಣದ ಘಟನೆ ಸ್ಥಳಕ್ಕೆ ಹಿರಿಯ ಅಧಿಕಾರಿ/ಸಿಬ್ಬಂದಿಯವರುಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ, ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ ಎಂದು ಮಾಹಿತಿ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X