ಕೊಡಗು | ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ; ಮಾಹಿತಿ ನೀಡಲು ಎಸ್‌ಪಿ ಮನವಿ

Date:

Advertisements

ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಕೊಡಗು ಜಿಲ್ಲಾ ವರಿಷ್ಠಾಧಿಕಾರಿ ಕೆ ರಾಮರಾಜನ್‌ ಕೋರಿದ್ದಾರೆ.

2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೇವ್ ಪಾರ್ಟಿ ನೆಪದಲ್ಲಿ ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಅಥವಾ ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿ ಸಂಖ್ಯೆ: 08272 228330, 9480804900ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ  ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಪ್ರಕಟಣೆ ಹೊರಡಿಸಿದ್ದಾರೆ.

“ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳ ಮಾಲೀಕರು Noise Pollution (Regulation and Control) Rules-2000 ರ ಅನ್ವಯ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‌ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ ಸಿಸ್ಟಂ, ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು” ಎಂದು ತಿಳಿಸಿದ್ದಾರೆ.

Advertisements

“ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ, ಸರಬರಾಜು ಮತ್ತು ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಾಟ ಮತ್ತು ಬಳಕೆ ಮಾಡಲು ಸಹಕರಿಸಿರುವುದು ಕಂಡುಬಂದಲ್ಲಿ ಹೋಂ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಕಲಂ: 25 ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಿಗೆ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಧಿಕಾರಿಗಳ ನಿರ್ಲಕ್ಷ್ಯ; ದಸಂಸ ಆಕ್ರೋಶ

“ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಎಲ್ಲಿಯೂ ಬಹಿರಂಗಪಡಿಸುವುದಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X