ಕೊಡಗು | ಕಟ್ಟೆಮಾಡು ಗ್ರಾಮದಲ್ಲಿ ಜ.2ರವರೆಗೆ ಸೆಕ್ಷನ್‌ 163 ಜಾರಿ

Date:

Advertisements

ಕೊಡಗು ಜಿಲ್ಲೆಯ ಮಡಿಕೇರಿಯ ಎಸ್ ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2ರವರೆಗೆ ಸೆಕ್ಷನ್‌ 163ನ್ನು ಜಾರಿಗೊಳಿಸಿದ್ದು, ಜನರ ಗುಂಪು ಸೇರುವಿಕೆ, ಪ್ರತಿಭಟನೆ, ಮೆರವಣಿಗೆ, ಜಾಥಾ, ಘೋಷಣೆಗಳಿಗೆ ತಡೆ ನೀಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ಅಹಿತಕರ ಘಟನೆ ನಡೆದಿದ್ದು, ಈ ವಿಚಾರವಾಗಿ ಸದರಿ ಸ್ಥಳದಲ್ಲಿ ಕಾನೂನು ಸುರಕ್ಷತೆಗಾಗಿ ಮಡಿಕೇರಿ ಉಪವಿಭಾಗೀಯ ದಂಡಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಸೆಕ್ಷನ್‌ 163ನ್ನು ಜಾರಿಗೊಳಿ ಆದೇಶಿಸಿದ್ದಾರೆ.

image 36 1

ಕಾನೂನು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ ದತ್ತವಾದ ಅಧಿಕಾರದಂತೆ ಎಸ್ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 05 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಡಿಸೆಂಬರ್‌ 30ರ ಬೆಳಿಗ್ಗೆ 6ರಿಂದ ಜನವರಿ 2ರ ಬೆಳಿಗ್ಗೆ 6ರವರೆಗೆ 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ, ಪ್ರತಿಭಟನೆ, ಮೆರವಣಿಗೆ, ರ್‍ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಿದ್ದಾರೆ.

Advertisements

ಕೊಡಗು ಜಿಲ್ಲಾಡಳಿತದಿಂದ ಸೋಮವಾರ ಶಾಂತಿ ಸಭೆ ನಡೆಸಲು ನಿರ್ಧಾರ

ಕಟ್ಟೆಮಾಡು ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಡಳಿತವು ಡಿಸೆಂಬರ್‌ 30ರ ಸೋಮವಾರ ಮಧ್ಯಾಹ್ನ 3ಕ್ಕೆ ಶಾಂತಿ ಸಭೆ ನಡೆಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ ಎಂಬುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ಘಟನೆ ಹಿನ್ನೆಲೆ

ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದಲ್ಲಿ ನೆಲೆನಿಂತಿರುವ ಮೃತ್ಯುಂಜಯ ದೇವಾಲಯದಲ್ಲಿ ವಾರ್ಷಿಕ ಪೂಜೆಯನ್ನು ಹಮ್ಮಿಕೊಳ್ಳಲಾಹಿತ್ತು. ಒಂದು ವರ್ಗದ ಜನರು ಸಾಂಪ್ರದಾಯಿಕ ಉಡುಪನ್ನು ತೊಟ್ಟುಕೊಂಡು ದೇವಾಲಯದ ಒಳಗೆ ಮತ್ತೊಂದು ಗುಂಪು ಪ್ರವೇಶಿಸದಂತೆ ನಿರ್ಬಂಧ ಹೇರಿದಾಗ ಘರ್ಷಣೆ ನಡೆದಿದೆ. ಸಾಂಪ್ರದಾಯಿಕ ಉಡುಪು ತೊಟ್ಟವರ ಜನಾಂಗದವರ ಸಂಖ್ಯೆ ಈ ಭಾಗದಲ್ಲಿ ಕಡಿಮೆಯಿದೆ ಎಂದು ಹೇಳಲಾಗಿದೆ. ನಂತರ ಅ ವರ್ಗದ ಜನರು ಶಾಂತಿ ಕಾಪಾಡಲು ದೇವಾಲಯದ ಹೊರಬಂದು ಈ ತೀರ್ಮಾನವನ್ನು ಪ್ರತಿಭಟಿಸಿದ್ದಾರೆ. ಘರ್ಷಣೆಯ ಸಂದರ್ಭ ಕಡಿಮೆ ಸಂಖ್ಯೆಯಲ್ಲಿರುವ ಜನಾಂಗದ ಮೇಲೆ ಕೆಲವರಿಂದ ಹಲ್ಲೆಗೆ ಯತ್ನಿಸಲಾಗಿದೆ ಆರೋಪಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲಾಡಳಿತದಿಂದ ವಿಶ್ವಮಾನವ ಕುವೆಂಪು ದಿನಾಚರಣೆ

ಇದೀಗ ಈ ‌ಪ್ರಕರಣವು ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಪ್ರಕರಣಕ್ಕೆ ತೆರೆ ಎಳೆಯುವಂತೆ ಸಂಸದ ಯದುವೀರ್ ಒಡೆಯರ್ ಮತ್ತು ಇಬ್ಬರು ಶಾಸಕರುಗಳಾದ ಎ ಎಸ್ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X