ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ: ಸೂಫಿ ಹಾಜಿ

Date:

Advertisements

ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸಲು ‘ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ’ವನ್ನು ರಚಿಸಲು ಸರ್ಕಾರ ಮುಂದಾಗಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ವಿರಾಜಪೇಟೆಯ ದುದ್ದಿಯಂಡ ಹೆಚ್. ಸೂಫಿ ಹಾಜಿ ಒತ್ತಾಯಿಸಿದ್ದಾರೆ.

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ತಾಲೂಕಿನ ನಲ್ವತ್ತೋಕ್ಲಿನಲ್ಲಿ ಚೋಕ್ ಸಿಟಿ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ರಚಿಸಬೇಕು. ಇದರಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದಲ್ಲದೆ ಜಿಲ್ಲೆಯಿಂದ ಹೆಚ್ಚಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ತಯಾರು ಮಾಡಬಹುದು” ಎಂದು ಹೇಳಿದರು.

“ದೇಶದ ಹಾಕಿ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಕೊಡಗು ಜಿಲ್ಲೆ ನೀಡಿದ ಕೊಡುಗೆ ಇಡೀ ಭಾರತವೇ ಹೆಮ್ಮೆಪಡುವ ಮಟ್ಟಿಗಿದೆ. ಈ ಹಿನ್ನೆಲೆಯಲ್ಲಾದರೂ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು. ಅಲ್ಲದೆ ಪ್ರತಿ ವರ್ಷದ ಬಜೆಟ್ಟಿನಲ್ಲಿ ಇದಕ್ಕಾಗಿ ಹಣವನ್ನು ಮೀಸಲಿಟ್ಟು ಕೊಡಗಿನಲ್ಲಿ ನಡೆಯುವ ಕ್ರೀಡಾಕೂಟಗಳನ್ನು ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಕೊಡಗಿನ ಜನಪ್ರತಿನಿಧಿಗಳು ಸರ್ಕಾರದ ಉನ್ನತ ಮಟ್ಟದಲ್ಲಿ ಒತ್ತಡ ಹೇರಬೇಕು. ಮುಂಬರುವ ಬಜೆಟ್ಟಿನಲ್ಲೇ ಈ ಪ್ರಾಧಿಕಾರವನ್ನು ಘೋಷಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಬೇಕು ಎಂದು ಒತ್ತಾಯಿಸಿದ ಸೂಫಿ ಹಾಜಿ, ಕೊಡಗಿನ ಕ್ರೀಡಾ ಚಟುವಟಿಕೆಗಳಿಗೆ ಸರಕಾರ ಸೂಕ್ತವಾಗಿ ಉತ್ತೇಜನ ನೀಡದಿದ್ದಲ್ಲಿ ಕೊಡಗನ್ನು ಕ್ರೀಡೆಯ ತವರು ಎಂದು ಕರೆಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಹೇಳಿದರು.

Advertisements

ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸ್ಕ್ವಾಡ್ ಚೋಕ್ ಸಿಟಿ ತಂಡ ವಿನ್ನರ್ಸ್ ಪ್ರಶಸ್ತಿ ಪಡೆದುಕೊಂಡರೆ, ಸುಂಕದಕಟ್ಟೆಯ ಉತ್ತಮ್ ಫ್ರೆಂಡ್ಸ್ ತಂಡ ರನ್ನರ್ಸ್ ಸ್ಥಾನ ಪಡೆಯಿತು. ಫೈನಲ್ ಪಂದ್ಯದಲ್ಲಿ ಸ್ಕ್ವಾಡ್ ಚೋಕ್ ಸಿಟಿ ತಂಡ ಸುಂಕದಕಟ್ಟೆಯ ಉತ್ತಮ ಫ್ರೆಂಡ್ಸ್ ತಂಡವನ್ನು 2-0 ಗೋಲುಗಳಿಂದ ಸೋಲಿಸಿ ವಿಜಯದ ಮಾಲೆಯನ್ನು ತನ್ನ ಕೊರಳಿಗೇರಿಸಿಕೊಂಡಿತು.

ಇದಕ್ಕೂ ಮೊದಲು ನಡೆದ ಮೊದಲ ಸೆಮಿ ಫೈನಲ್ ಪಂದ್ಯಾವಳಿಯಲ್ಲಿ ಸ್ಕ್ವಾಡ್ ಚೋಕ್ ಸಿಟಿ ತಂಡ ಚಾಮೆ ಫುಟ್ಬಾಲ್ ಕ್ಲಬ್ ತಂಡವನ್ನು 1-0 ಗೋಲಿನಿಂದ ಮತ್ತು ಸುಂಕದಕಟ್ಟೆಯ ಉತ್ತಮ್ ಫ್ರೆಂಡ್ಸ್ ತಂಡ ಸಿ.ಎಫ್.ಸಿ ಅಮ್ಮತ್ತಿ ತಂಡವನ್ನು 1-0 ಗೋಲುಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತ್ತು. ವಿಜೇತ ತಂಡಗಳಿಗೆ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ನಗದು ಬಹುಮಾನ ಸೇರಿದಂತೆ ಪಾರಿತೋಷಕಗಳನ್ನು ವಿತರಿಸಲಾಯಿತು. ಒಟ್ಟು 32 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ಖಜಾನಾಧಿಕಾರಿ ಕನ್ನಡಿಯಂಡ ಎ. ಆಲಿ ಹಾಜಿ, ನಲ್ವತ್ತೋಕ್ಲಿನ ಮೊಹಿದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಡಿ. ಎಫ್. ಆಶ್ರಫ್, ಸ್ಥಳೀಯರಾದ ಹೆಚ್. ಎ. ಮೊಹಮ್ಮದ್ ಹಾಜಿ, ಕೆ.ಎಂ. ಹ್ಯಾರಿಸ್, ಪಿ.ಎ. ಬಶೀರ್, ಡಿ.ಎಸ್. ಶರ್ಹಾನ್, ಸಯಿದ್, ಡಿ.ಎಂ. ಸಿರಾಜ್, ಎಚ್.ಎಂ. ನೌಫಲ್ ಮೊದಲಾದವರು ಭಾಗವಹಿಸಿದ್ದರು.

ಪಂದ್ಯಾವಳಿ ಆಯೋಜಕರಾದ ನಲ್ವತ್ತೋಕ್ಲಿನ ಚೋಕ್ ಸಿಟಿ ಫುಟ್ಬಾಲ್ ಕ್ಲಬ್ ನ ಮುಖ್ಯಸ್ಥರಾದ ಶಾಹಿದ್, ಶರ್ಮಿದ್, ಮೊಹಾದ್, ಅಜನಾಸ್, ಅಜ್ಮಲ್ ಮೊದಲಾದವರು ಪಂದ್ಯಾವಳಿಯ ಮೇಲುಸ್ತುವಾರಿ ವಹಿಸಿದ್ದರು.

ಚಿತ್ರ ಶೀರ್ಷಿಕೆ: ನಲ್ವತ್ತೋಕ್ಲಿನಲ್ಲಿ ಮುಕ್ತಾಯಗೊಂಡ ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯ ವಿನ್ನರ್ಸ್ ತಂಡಕ್ಕೆ ಟ್ರೋಫಿ ವಿತರಿಸುತ್ತಿರುವ ಸೂಫಿ ಹಾಜಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X