ಕೊಡಗು | ಕೇರಳ ಗಡಿಯಲ್ಲಿ ಪೊಲೀಸರ ವಿರುದ್ಧ ಗುಂಡಿನ ಚಕಮಕಿ; ಮಾವೋವಾದಿಗಳೆಂದು ಶಂಕೆ

Date:

Advertisements

ಕೊಡಗು ಜಿಲ್ಲೆಯಲ್ಲಿರುವ ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ, ಮಾವೋವಾದಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಗೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಜಿಲ್ಲೆಯಲ್ಲಿ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ.

ಕೊಡಗಿನ ಗಡಿಭಾಗದಿಂದ 4 ರಿಂದ 5 ಕಿ.ಮೀ ದೂರದ ಕೇರಳ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರ ವಿರುದ್ಧ ಗುಂಡಿನ ಚಕಮಕಿ ನಡೆಸಿರುವವರು ಕಾಡುಪ್ರಾಣಿಗಳ ಬೇಟೆಗಾರರಾಗಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಅವರನ್ನು ಮಾವೋವಾದಿಗಳೆಂದು ಪೊಲೀಸರು ಹೇಳುತ್ತಿದ್ದಾರೆ.

ಕೇರಳದಿಂದ ಕೊಡಗು ಪ್ರವೇಶಿಸುವ ರಸ್ತೆಗಳಲ್ಲಿರುವ ಚೆಕ್ ಪೋಸ್ಟ್‌ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕುಟುಂಬದ ದೀಪ ನಂದಿಸಿದ ದೀಪಾವಳಿ; ಪಟಾಕಿ ಸಿಡಿದು ಯುವಕ ಸಾವು

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಗಡಿಭಾಗಗಳಾದ ಬಿರುನಾಣಿ, ತೆರಾಳು, ಪರಕಟಗೆರೆ ಮತ್ತು ಕುಟ್ಟ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೂಂಬಿಂಗ್ ಕಾರ್ಯಾಚರಣೆ ಕುರಿತು ಚರ್ಚಿಸಿದ್ದಾರೆ.

ಕಳೆದ ವಾರವಷ್ಟೇ ಕೇರಳ ಗಡಿಯಲ್ಲಿ ಐವರು ಮಾವೋವಾದಿಗಳು ಹಾಗೂ ಕೇರಳ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X