ಕೊಡಗು | ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ವರ್ಗಾವಣೆ

Date:

Advertisements

ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು ನಿರಂತರವಾಗಿ ಎದುರಿಸುತ್ತಿದ್ದ ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಡಿಪೋದಿಂದ ಅವರನ್ನು ಹಾಸನ ಜಿಲ್ಲೆಯ ರಾಮನಾಥಪುರ ಡಿಪೋಗೆ ವರ್ಗಾವಣೆ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಿಡಿಸಿದೆ.

ಗೀತಾ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಅಲಿ ಅವರನ್ನು ಪ್ರಭಾರ ವ್ಯವಸ್ಥಾಪಕರನ್ನಾಗಿ ನೇಮಕ ಮಾಡಲಾಗಿದೆ.

ಕಳೆದ ಎಂಟು ವರ್ಷಗಳಿಂದ ಮಡಿಕೇರಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಗೀತಾ ರವರ ಮೇಲೆ ಹಲವಾರು ಆರೋಪಗಳು ಕೇಳಿಬಂದಿದ್ದವು. ಹಿಂದಿನ ಸರ್ಕಾರದಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೂ, ಅಂದಿನ ಸ್ಥಳೀಯ ಶಾಸಕರ ನೆರವು ಪಡೆದು ಮಡಿಕೇರಿಯಲ್ಲಿಯೇ ಉಳಿದಿದ್ದರು.

Advertisements

ಇದೀಗ, ಬುಧವಾರ ಡಿಪೋದ ಕಿರಿಯ ಸಹಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ತಮ್ಮ ಈ ಸ್ಥಿತಿಗೆ ಗೀತಾ ಅವರೇ ಕಾರಣ ಎಂದು ಆರೋಪಿಸಿದ್ದರು. ಈ ಬೆನ್ನಲ್ಲೇ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ನಟ ಚೇತನ್, ಪತ್ರಕರ್ತರು ಸೇರಿದಂತೆ ಹೋರಾಟಗಾರರಿಗೆ ಅರಣ್ಯ ಇಲಾಖೆ ನೊಟೀಸ್; ನಾಳೆ ವಿಚಾರಣೆಗೆ ಹಾಜರು

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಸರಿಸುಮಾರು...

ಕೊಡಗು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಎಸ್ಐಟಿಯಿಂದ ಪಾರದರ್ಶಕ ತನಿಖೆ ನಡೆಯುವಂತೆ ಸಿಪಿಐ ಮಾಸ್ ಲೈನ್ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ...

ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್...

Download Eedina App Android / iOS

X