ಕೊಡಗು | ದಸರಾ ಉತ್ಸವ ಆಚರಣೆ; ಅನುದಾನ ಬಿಡುಗಡೆಗೆ ನಿಯೋಗ

Date:

Advertisements

ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌ ಬೊಸರಾಜು ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಸಚಿವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು.

ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ಹಾಗೂ ನಗರಸಭಾ ಅಧ್ಯಕ್ಷ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಬಿ ವೈ ರಾಜೇಶ್, ನಗರಸಭಾ ಸದಸ್ಯ ಹಾಗೂ ದಸರಾ ಸಮಿತಿ ಖಜಾಂಚಿ ಅರುಣ್ ಶೆಟ್ಟಿ, ಪ್ರಮುಖರುಗಳಾದ ಟಿ ಪಿ ರಮೇಶ್, ಮುನೀರ್ ಅಹ್ಮದ್ ಸೇರಿದಂತೆ ಇತರರು ಇದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ಆನೆ ದಾಳಿಯಿಂದ ಬೆಳೆ ನಷ್ಟ; ಸಂತ್ರಸ್ತ ರೈತರ ಜಮೀನಿಗೆ ಸಂಕೇತ್ ಪೂವಯ್ಯ ಭೇಟಿ

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗದ ವತಿಯಿಂದ ಮನವಿ ಪತ್ರ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಮೃತ ಬಾಲಕನ​ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ...

ಆಯೋಗದ ವರದಿಯಲ್ಲಿ ಬಂಜಾರ ಜನಸಂಖ್ಯೆಯ ಅಂಕಿ-ಅಂಶಗಳು ವಾಸ್ತವಕ್ಕೆ ದೂರ: ಡಿ ರಾಮನಾಯಕ್

ಕರ್ನಾಟಕದ ಬಂಜಾರ ಸಮುದಾಯಲ್ಲಿ ಕೇವಲ 14,05,272ರಷ್ಟು ಜನಸಂಖ್ಯೆ ಇರುವುದಾಗಿ ವರದಿಯಲ್ಲಿ ನೀಡಿರುವ...

ಕೊಡಗು | ನಾಣಚ್ಚಿ ನಾಗರಹೊಳೆ : ಗೌರವ, ಘನತೆಯೊಂದಿಗೆ ನಡೆದುಕೊಳ್ಳಿ; ಆದಿವಾಸಿ ಬುಡಕಟ್ಟು ಜನರ ಆಗ್ರಹ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ನಾಣಚ್ಚಿ ನಾಗರಹೊಳೆಯಲ್ಲಿ ' ಅಂತರಾಷ್ಟ್ರೀಯ ಆದಿವಾಸಿ...

ಕೊಡಗು | ಅರಣ್ಯ ಇಲಾಖೆ ವಿಚಾರಣೆಗೆ ಹಾಜರು; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿದೆ : ನಟ ಚೇತನ್

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಅರಣ್ಯ ಭೂಮಿ...

Download Eedina App Android / iOS

X