ಕೊಡಗು | ಚಿನ್ನದ ಬ್ರೇಸ್ಲೆಟ್ಅನ್ನು ಕಳೆದುಕೊಂಡಿದ್ದವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್‌ ಸಿಬ್ಬಂದಿ

Date:

Advertisements

ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟ್‌ಅನ್ನು ವಾರಸುದಾರರಿಗೆ ತಲುಪಿಸಿ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪತ್ರಕರ್ತ ತೇಲಪಂಡ ಕವನ್ ಕಾರ್ಯಪ್ಪ ಅವರು ಆಗಸ್ಟ್ 29ರಂದು ಕುಶಾಲನಗರದಿಂದ ಮಡಿಕೇರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದಾಗ ಬ್ರೇಸ್ಲೆಟ್ ಕಳೆದುಕೊಂಡಿದ್ದರು. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರೋರ್ವರು ಬ್ರೇಸ್ಲೆಟನ್ನು ಚಾಲಕರಿಗೆ ನೀಡಿದ್ದು, ಮಡಿಕೇರಿ ಬಸ್ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೋಲೀಸ್ ಸಿಬ್ಬಂದಿ ಪ್ರೀತಿ ಘಾಟಗೆ ಅವರಿಗೆ ಮಾಹಿತಿ ನೀಡಿದ್ದರು.

ಮಹಿಳಾ ಪೊಲೀಸ್ ಸಿಬ್ಬಂದಿ ಪ್ರೀತಿ ಘಾಟಗೆ ಅವರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬುಧವಾರದಂದು ನಗರ ಠಾಣೆಯಲ್ಲಿ ಕವನ್ ಕಾರ್ಯಪ್ಪ ಅವರು ಪ್ರೀತಿ ಘಾಟಗೆ ಅವರಿಂದ ಬ್ರೇಸ್ಲೆಟ್‌ ಪಡೆದುಕೊಂಡರು. ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿಗಳು, ಸಿಬ್ಬಂದಿಗಳು ಪ್ರೀತಿ ಅವರ ಪ್ರಾಮಾಣಿಕತೆಗೆ ಪ್ರಶಂಶೆ ವ್ಯಕ್ತ ಪಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕಿ ವರ್ಗಾವಣೆ

ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟನ್ನು ವಾರಸುದಾರರಿಗೆ ತಲುಪಿಸಿದ ಗೌರವಕ್ಕೆ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರೀತಿ ಘಾಟಗೆ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ನಟ ಚೇತನ್, ಪತ್ರಕರ್ತರು ಸೇರಿದಂತೆ ಹೋರಾಟಗಾರರಿಗೆ ಅರಣ್ಯ ಇಲಾಖೆ ನೊಟೀಸ್; ನಾಳೆ ವಿಚಾರಣೆಗೆ ಹಾಜರು

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಸರಿಸುಮಾರು...

ಕೊಡಗು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಎಸ್ಐಟಿಯಿಂದ ಪಾರದರ್ಶಕ ತನಿಖೆ ನಡೆಯುವಂತೆ ಸಿಪಿಐ ಮಾಸ್ ಲೈನ್ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ...

ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್...

Download Eedina App Android / iOS

X