ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟ್ಅನ್ನು ವಾರಸುದಾರರಿಗೆ ತಲುಪಿಸಿ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪತ್ರಕರ್ತ ತೇಲಪಂಡ ಕವನ್ ಕಾರ್ಯಪ್ಪ ಅವರು ಆಗಸ್ಟ್ 29ರಂದು ಕುಶಾಲನಗರದಿಂದ ಮಡಿಕೇರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳುತ್ತಿದ್ದಾಗ ಬ್ರೇಸ್ಲೆಟ್ ಕಳೆದುಕೊಂಡಿದ್ದರು. ಇದೇ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರೋರ್ವರು ಬ್ರೇಸ್ಲೆಟನ್ನು ಚಾಲಕರಿಗೆ ನೀಡಿದ್ದು, ಮಡಿಕೇರಿ ಬಸ್ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೋಲೀಸ್ ಸಿಬ್ಬಂದಿ ಪ್ರೀತಿ ಘಾಟಗೆ ಅವರಿಗೆ ಮಾಹಿತಿ ನೀಡಿದ್ದರು.
ಮಹಿಳಾ ಪೊಲೀಸ್ ಸಿಬ್ಬಂದಿ ಪ್ರೀತಿ ಘಾಟಗೆ ಅವರು ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬುಧವಾರದಂದು ನಗರ ಠಾಣೆಯಲ್ಲಿ ಕವನ್ ಕಾರ್ಯಪ್ಪ ಅವರು ಪ್ರೀತಿ ಘಾಟಗೆ ಅವರಿಂದ ಬ್ರೇಸ್ಲೆಟ್ ಪಡೆದುಕೊಂಡರು. ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿಗಳು, ಸಿಬ್ಬಂದಿಗಳು ಪ್ರೀತಿ ಅವರ ಪ್ರಾಮಾಣಿಕತೆಗೆ ಪ್ರಶಂಶೆ ವ್ಯಕ್ತ ಪಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕಿ ವರ್ಗಾವಣೆ
ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟನ್ನು ವಾರಸುದಾರರಿಗೆ ತಲುಪಿಸಿದ ಗೌರವಕ್ಕೆ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರೀತಿ ಘಾಟಗೆ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ.