ಕೊಡಗು | ಕಥೆ ರಚನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮ

Date:

ವಿದ್ಯಾರ್ಥಿಗಳು ಕಥೆ ಬರೆಯಲು ಕನ್ನಡ ಸಾಹಿತ್ಯ ಪರಿಷತ್ ವೇದಿಕೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು ಹಾಗೂ ಸಾಹಿತಿಗಳು ಆಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹಮದ್ ಅವರು ಕಿವಿಮಾತು ಹೇಳಿದರು.

- Advertisement -

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ.ಡಿಸೋಜಾ ರವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ನಿಧಿಯಂತೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಕಥೆ ರಚನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ವಿದ್ಯಾರ್ಥಿಗಳು ಅವರ ಇಚ್ಛೆಯಂತೆ ಕಲಿತು ಬರೆಯುವ ಕಥೆಗಿಂತ ವಿಷಯ ಆಧಾರಿತ ಕಥೆಯನ್ನು ಬರೆಯಬೇಕೆನ್ನುವ ಉದ್ದೇಶದಿಂದ ಪರಿಷತ್ತು ವಿದ್ಯಾರ್ಥಿಗಳಿಗೆ ಆಯ್ಕೆ ವಿಷಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಅನುಭವ ಹಾಗೂ ಭಾವನೆಗಳನ್ನು ಕೇಂದ್ರೀಕರಿಸಿ ಜನರ ಮನ ಮುಟ್ಟುವಂತೆ ಕಥೆ ಬರೆಯಲು ಸಾಧ್ಯವಾಗಲಿ” ಎಂದು ಶುಭ ಹಾರೈಸಿದರು.

ಬರಹಗಾರ್ತಿ ಸುನಿತಾ ಕುಶಾಲನಗರ ಮಾತನಾಡಿ, “ಕಥೆ ಬರೆಯಬೇಕೆಂದರೆ ಮೊದಲು ಮೂಲ ಹಾಗೂ ಅನುವಾದಿತ ಕಥೆಗಳನ್ನು ಓದಿಕೊಳ್ಳಬೇಕು. ಕಥೆ ಅನುಕರಣೆಯಾಗಬೇಕೆಂದಿಲ್ಲ ಮನಸಿಗೆ ಮೂಡಿದ ವಿಷಯಗಳ ಕುರಿತು ಕಥೆ ಬರೆಯಬಹುದು. ಲೋಕ ಸಾಹಿತ್ಯದ ಕುರಿತು ತಿಳಿದುಕೊಂಡರೆ ಕಥೆ ಬರೆಯಲು ಅನುಕೂಲವಾಗುತ್ತದೆ. ಕಥೆ ಎಂದಿಗೂ ದೊಡ್ಡದಾಗಿರದೆ ಸಣ್ಣ ಕಥೆಗಳನ್ನು ಬರೆದರೆ ಆ ಬರಹ ಹೆಚ್ಚಿನ ಜನರನ್ನು ತಲುಪುತ್ತದೆ” ಎಂದು ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.

ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ‌ ಆರ್ ವಿಜಯ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, “ಕಥೆ ಬರೆಯಬೇಕೆಂದರೆ ಕಥೆಯನ್ನು ಓದುವ ಹಾಗೂ ಕೇಳುವ ಮನಸಿರಬೇಕು. ಇಂದಿನ ಕಥಾ ಸ್ಪರ್ಧೆಗೆ ಆಗಮಿಸಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನಿಸಿದರೆ ಖಂಡಿತ ಮುಂದೊಂದು ದಿನ ಜಿಲ್ಲೆಯಲ್ಲಿ ಉತ್ತಮ ಕಥೆಗಾರರು ರೂಪುಗೊಳ್ಳಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಸಂಪತ್ ಕುಮಾರ್ ಮಾತನಾಡಿ, “ಕಥೆ ಬರೆಯುವಾಗ ಜನಪದ ಭಾಷೆಯನ್ನು ಬಳಸಿಕೊಂಡರೆ ಜನರ ಮನಸನ್ನು ತಲುಪುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಪೋಷಕರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಮಂಜುನಾಥ್ ಸೇರಿದಂತೆ 150 ಮಂದಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು...

ಕೊಡಗು | ಭಾರೀ ಮಳೆಗೆ ತ್ರಿವೇಣಿ ಸಂಗಮ ಭರ್ತಿ: ಉದ್ಯಾನ, ಗದ್ದೆಗಳು ಜಲಾವೃತ

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮಡಿಕೇರಿ ತಾಲೂಕಿನ...

ಕೊಡಗು | ಯುವಜನರಲ್ಲಿ ಎಚ್‌ಐವಿ ತಡೆಗೆ ಜಾಗೃತಿ: ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ...