ಕೊಡಗು | ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ತೇಲಪಂಡ ಶಿವಕುಮಾರ್ ಒತ್ತಾಯ

Date:

ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು.

- Advertisement -

ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿಯಿಂದ ಆಯೋಜಿಸಿದ್ದ ಅಂತರ ಕೊಡವ ಸಮಾಜಗಳ ನಡುವಣ ಸೀಮಿತ ಓವರ್‌ಗಳ ಲೆದರ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಕೊಡವ ಜನಾಂಗದ ಪ್ರತಿಯೊಬ್ಬರಿಗೂ ಹಾಕಿ ಕ್ರೀಡೆಯು ರಕ್ತಗತವಾಗಿ ಬಂದಿದೆ. ಹಾಕಿ ಕ್ರೀಡೆಗೆ ಮಹತ್ವ ನೀಡುವಂತೆ, ಕ್ರಿಕೆಟ್‌ಗೂ ಪ್ರೋತ್ಸಾಹ ನೀಡುವಂತಾಗಬೇಕು. ಕೊಡಗು ಕ್ರೀಡಾ ಜಿಲ್ಲೆಯಾದರು ಕೆಲವು ತಾಂತ್ರಿಕ ಮತ್ತು ದೈಹಿಕ ಸಮಸ್ಯೆಗಳಿಂದಾಗಿ ಜಿಲ್ಲೆಯ ಕ್ರೀಡಾಪಟುಗಳು ದೇಸಿ ಮಟ್ಟದಲ್ಲಿ ಎಡುವುತ್ತಿದ್ದಾರೆ” ಎಂದರು.

ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ ಸುಬ್ರಮಣಿ ಮಾತನಾಡಿ, “ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳುವ ಕ್ರೀಡಾಪಟುಗಳು ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಬಹುತೇಕ ಯುವಜನರು ಇಂದು ಮೊಬೈಲ್‌ ಗೀಳಿಗೆ ದಾಸರಾಗಿದ್ದಾರೆ. ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕರ್ಸನ್‌ ಕಾರ್ಯಪ್ಪ ಮಾತನಾಡಿ, “ಜಿಲ್ಲೆಯ ಹಲವೆಡೆಯ ಒಟ್ಟು 10 ಕೊಡವ ಸಮಾಜಗಳ ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಸಂಸ್ಥೆಯ ಎಲ್ಲ ಸದಸ್ಯರು ಮತ್ತು ದಾನಿಗಳ ಸಹಕಾರ ಮರೆಯಲಾಗದು” ಎಂದರು.

ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್, ಪುರಸಭೆ ಸದಸ್ಯೆ ಯಶೋಧಾ ಮಂದಣ್ಣ ಮತ್ತು ಉದ್ಯಮಿ ನಾಗೇಶ್ ಪವನ್, ಕೊಡವ ಕ್ರಿಕೆಟ್ ಅಕಾಡೆಮಿಯ ಎಲ್ಲ ಕಾರ್ಯಕಾರಿ ಮಂಡಳಿ ಸದಸ್ಯರು, ಕ್ರೀಡಾ ಪಟುಗಳು, ಸಮುದಾಯದ ಬಾಂಧವರು ಹಾಗೂ ಕ್ರೀಡಾ ಪ್ರೇಮಿಗಳು ಇದ್ದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ದೈಹಿಕ ಶಿಕ್ಷಕ ವಶಕ್ಕೆ

ಟೂರ್ನಿಯ ಪ್ರಥಮ ಪಂದ್ಯದಲ್ಲಿ ಭಾಗವಹಿಸಿದ್ದ ತಂಡಗಳಾದ ಮಕ್ಕಂದೂರು ಕೊಡವ ಸಮಾಜ ಮತ್ತು ಮೂರ್ನಾಡು ಕೊಡವ ಸಮಾಜಗಳ ಆಟಗಾರರಿಗೆ ಗಣ್ಯರು ಶುಭ ಕೋರಿದರು.
ಚಕ್ಕೇರ ನವೀನ್, ಆಳಮೇಂಗಡ ಮೋಹನ್ ಚಂಗಪ್ಪ ಅವರು ತೀರ್ಪುಗಾರರಾಗಿ ಹಾಗೂ ಅದೇಂಗಡ ಶಾಶ್ವತ್ ಅವರು ಸ್ಕೋರರ್ ಆಗಿ ಕಾರ್ಯನಿರ್ವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...