ವಿರಾಜಪೇಟೆ ರಸ್ತೆ ಅಗಲೀಕರಣಕ್ಕೆ ಅಸ್ತು

Date:

Advertisements

ಕೊಡಗು ಜಿಲ್ಲೆ ವಿರಾಜಪೇಟೆಯ ಮುಖ್ಯರಸ್ತೆ, ಮಲಬಾರ್ ರಸ್ತೆ ಹಾಗೂ ಮಹಿಳಾ ಸಮಾಜ ರಸ್ತೆಯ ಅಗಲೀಕರಣಕ್ಕೆ ಸರ್ವೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪುರಸಭೆ ಮುಖ್ಯ ಅಧಿಕಾರಿಗಳು ಖುದ್ದು ಹಾಜರಿದ್ದು ಅಳತೆ ಪ್ರಕ್ರಿಯೆ ನಡೆಸಿದರು.

ಮುಖ್ಯ ರಸ್ತೆಯ ಮಧ್ಯಭಾಗದಿಂದ ಎರಡೂ ಕಡೆ 10 ಮೀಟರ್ ಅಳತೆ ಮಾಡಿ ಗುರುತು ಹಾಕಲಾಗಿದೆ. ಬಹುತೇಕ ವರ್ಷಗಳಿಂದ ರಸ್ತೆ ಅಗಲೀಕರಣಕ್ಕೆ ಹೆಜ್ಜೆ ಹಾಕಿದರೂ ಕೂಡ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಅಡೆತಡೆಯಿಂದ ತೀವ್ರ ಕಿರಿದಾಗಿರುವ ವಿರಾಜಪೇಟೆ ನಗರದ ರಸ್ತೆಗಳ ಅಗಲೀಕರಣಕ್ಕೆ ಅಡ್ಡಿ ಉಂಟಾಗಿತ್ತು.

ರಸ್ತೆ ಅಗಲೀಕರಣದ ವಿರುದ್ಧ ಕೆಲವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆಯನ್ನೂ ತಂದಿದ್ದರು. ತಡೆಯಾಜ್ಞೆ ತೆರವುಗೊಳಿಸಲು ಕೆಲವರು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಈವರೆಗೆ ಅಸಾಧ್ಯವಾಗಿದ್ದರಿಂದ ರಸ್ತೆ ಅಗಲೀಕರಣ ನೆನೆಗುದ್ದಿಗೆ ಬಿದ್ದಿತ್ತು. ಇದೀಗ ಶಾಸಕ ಎ ಎಸ್ ಪೊನ್ನಣ್ಣನವರ ಆಸಕ್ತಿಯಿಂದ ತೀವ್ರ ಕಿರಿದಾಗಿರುವ ವಿರಾಜಪೇಟೆ ರಸ್ತೆಗೆ ಮುಕ್ತಿ ದೊರಕಿಸಲು ಸರ್ವೆ ಕಾರ್ಯ ನಡೆಯುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ‌ಢಿಕ್ಕಿ; ತಪ್ಪಿದ ಅನಾಹುತ

ಜಿಲ್ಲಾಧಿಕಾರಿ ವೆಂಕಟರಾಜ್, ತಹಶೀಲ್ದಾರ್ ಅವರು ಮಹಿಳಾ ಸಮಾಜ ರಸ್ತೆಯ ಅಗಲೀಕರಣ ಸರ್ವೆ ಸಂದರ್ಭದಲ್ಲಿ ಖುದ್ದು ಹಾಜರಿದ್ದು ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ನಟ ಚೇತನ್, ಪತ್ರಕರ್ತರು ಸೇರಿದಂತೆ ಹೋರಾಟಗಾರರಿಗೆ ಅರಣ್ಯ ಇಲಾಖೆ ನೊಟೀಸ್; ನಾಳೆ ವಿಚಾರಣೆಗೆ ಹಾಜರು

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಸರಿಸುಮಾರು...

ಕೊಡಗು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಎಸ್ಐಟಿಯಿಂದ ಪಾರದರ್ಶಕ ತನಿಖೆ ನಡೆಯುವಂತೆ ಸಿಪಿಐ ಮಾಸ್ ಲೈನ್ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ...

ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್...

Download Eedina App Android / iOS

X