ಉಡುಪಿ | ಕುಂದಾಪುರದ ಬೀಚ್ ನಲ್ಲಿ ಈಜಲು ಬಂದ ಮೂವರು ಸಹೋದರರು ನೀರು ಪಾಲು

Date:

Advertisements

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಡಿ ಬೀಚಿನಲ್ಲಿ ಕುಟುಂಬ ಸಮೇತರಾಗಿ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ.

ತಕ್ಷಣದ ಮಾಹಿತಿಯಂತೆ ಅಂಪಾರು ಐದು ಸೆಂಟ್ ನಿವಾಸಿ ದಾಮೋದರ್ ಪ್ರಭು ಎಂಬುವರ ಮಗ ಧನರಾಜ್ (23) ಸಾವನ್ನಪ್ಪಿದ್ದರೆ, ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು ಇದುವರೆಗೆ ಪತ್ತೆ ಆಗಿರುವುದಿಲ್ಲ. ಮೂರು ಜನರು ಸಹೋದರರಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್‌ ಎನ್‌ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಇಂದು ಶನಿವಾರ ಆಗಿದ್ದರಿಂದ ಮೂವರು ಸಹೋದರರು ಸಂಜೆ 6 ಗಂಟೆ ಸುಮಾರಿಗೆ ಕೊಡಿ ಬೀಚಿನಲ್ಲಿ ಈಜಾಡಲು ಬಂದಿದ್ದರು ಎನ್ನಲಾಗಿದೆ. ಗಂಭೀರ ಗೊಂಡಿರುವ ಧನುಷ್ ಹಾಗೂ ಶವವಾಗಿ ಪತ್ತೆಯಾಗಿರುವ ಧನರಾಜ್‌ ಇಬ್ಬರು ಮುಖಕ್ಕೆ ಮಾಸ್ಕಸ್ಕ್ ಮತ್ತು ಕಣ್ಣಿಗೆ ಕಣ್ಣವಚ ಧರಿಸಿದ್ದರು. ಮೇಲ್ನೋಟಕ್ಕೆ ಈಜಾಡಲು ಸಿದ್ದರಾಗಿ ಬಂದಿದ್ದರು ಎನ್ನಲಾಗಿದೆ.

Advertisements

ಘಟನೆ ಸಂದರ್ಭ ಬೆಂಗಳೂರಿನ ಪ್ರವಾಸಿಗರುವರು ಗಮನಿಸಿ ತಕ್ಷಣ ಸಮುದ್ರಕ್ಕೆ ಹಾರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ ಆದರೆ ದಾಮೋದರ ಪ್ರಭು ಅವರ ಅಣ್ಣನ ಮಗ ದರ್ಶನ್ ನಾಪತ್ತೆಯಾಗಿದ್ದು ಅವರ ಪತ್ತೆಗಾಗಿ ಈಜು ತಜ್ಞರು ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X