ಉಡುಪಿ | ಕೋಡಿಬೇಂಗ್ರೆ ಬೋಟ್ ದುರಂತ ಪ್ರಕರಣ: ಮೂವರು ಬಂಧನ

Date:

ಕೋಡಿಬೇಂಗ್ರೆ ಅಳಿವೆಬಾಗಿಲು ಪ್ರದೇಶದ ಸ್ವರ್ಣ ನದಿಯಲ್ಲಿ ನಡೆದ ಭೀಕರ ಬೋಟ್ ದುರಂತದಲ್ಲಿ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಘಟನೆಯ ಹಿನ್ನೆಲೆ
ಜನವರಿ 26ರಂದು ಬೆಳಿಗ್ಗೆ 10.45ರ ಸುಮಾರಿಗೆ ಮೈಸೂರು ನಿವಾಸಿ ಗುರುಪ್ರಸಾದ್ (34) ಸೇರಿದಂತೆ ಒಟ್ಟು 29 ಮಂದಿಯನ್ನು ಆರೋಪಿಯಾದ ಸುಹಾಸ್ ಎರಡು ಪ್ರತ್ಯೇಕ ಬೋಟ್‌ಗಳಲ್ಲಿ ದೋಣಿ ವಿಹಾರಕ್ಕೆ ಕರೆದೊಯ್ದಿದ್ದನು. ಒಂದೇ ಬೋಟ್‌ನಲ್ಲಿ 14 ಮಂದಿ ಹಾಗೂ ಇನ್ನೊಂದು ಬೋಟ್‌ನಲ್ಲಿ 15 ಮಂದಿ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ 11.15ರ ವೇಳೆಗೆ ಕೋಡಿಬೇಂಗ್ರೆ ಅಳಿವೆಬಾಗಿಲು ಬಳಿ ‘ದಿ ವೇವ್ ರೈಡರ್’ ಎಂಬ ಹೆಸರಿನ ಬೋಟ್ ಅನ್ನು ಚಾಲಕರಾದ ಸೂಫಿಯಾನ್ ಮತ್ತು ವಾಸು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ತೀವ್ರವಾಗಿ ಎಡಬದಿಗೆ ತಿರುಗಿಸಿ ಚಲಾಯಿಸಿದ್ದರಿಂದ ಬೋಟ್ ಮಗುಚಿಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ವೇಳೆ ಬೋಟ್‌ನಲ್ಲಿದ್ದ 14 ಮಂದಿ ನೀರಿಗೆ ಬಿದ್ದು, ಶಂಕರಪ್ಪ (27), ಕುಮಾರಿ ಸಿಂಧು.ಪಿ (23) ಮತ್ತು ಕುಮಾರಿ ದಿಶಾ (26) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಳಿದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ, ಆರೋಪಿಗಳು ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಬೋಟ್ ವಿಹಾರ ನಡೆಸಿದ್ದಲ್ಲದೆ, ಬೋಟ್‌ ಪ್ರವಾಸಿಗರ ವಿಹಾರಕ್ಕೆ ಯೋಗ್ಯವೆಂಬ ಧೃಢೀಕರಣ ಪತ್ರವೂ ಹೊಂದಿರಲಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಲ್ಲದೇ, ಲೈಫ್ ಜಾಕೆಟ್ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದುದೂ ತನಿಖೆಯಲ್ಲಿ ದೃಢಪಟ್ಟಿದೆ.

ಘಟನೆ ನಡೆದ ಸ್ಥಳ ಕೋಟ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿರುವುದರಿಂದ ಪ್ರಕರಣವನ್ನು ಕೋಟ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುಹಾಸ್ ಶ್ರೀಯಾನ್ (23), ಸೂಫಿಯಾನ್ (20) ಹಾಗೂ ವಾಸು ಮೆಂಡನ್ (52)ರನ್ನು ದಸ್ತಗಿರಿ ಮಾಡಲಾಗಿದ್ದು, ಅವರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...