ಕೋಲಾರ | ಮಂದಿನ ಎಲ್ಲ ಚುನಾವಣೆಗಳಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿಗಳ ಸ್ಪರ್ಧೆ: ಲತೀಫ್ ಖಾನ್ ಅಮೀರ್ ಪಠಾಣ್

Date:

Advertisements

ಮುಂದಿನ ದಿನಗಳಲ್ಲಿ ಅಲ್ ಇಂಡಿಯಾ ಮಜಲಿಸ್ -ಎ-ಇತ್ತಹಾದುಲ್ ಮುಸ್ಲಿಮೀನ್ ಪಕ್ಷ ಸದೃಢವಾಗಿ ಸಂಘಟನೆ ಮಾಡುವುದರ ಜತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಹೆಚ್ಚಿನ ಜನಸೇವೆ ಮಾಡಲು ಅಧಿಕಾರಕ್ಕಾಗಿ ಮುಂದೆ ಬರುವ ಎಲ್ಲ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಲತೀಫ್ ಖಾನ್ ಅಮೀರ್ ಪಠಾಣ್ ತಿಳಿಸಿದರು.

ಕೋಲಾರ ನಗರದಲ್ಲಿ ಪಕ್ಷದ ಕಚೇರಿ ಉದ್ಘಾಟನೆ ನಂತರ ಖಾಸಗಿ ಮದುವೆ ಮಂಟಪದಲ್ಲಿ ಪಕ್ಷದ ಜಿಲ್ಲಾ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಹಾಗೂ ನೂತನ ಕಾರ್ಯಕರ್ತರು ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

“ಪರಿಪೂರ್ಣ ರಾಜಕಾರಣಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಬ್ಯಾರಿಸ್ಟರ್ ಅಸುದುದ್ದೀನ್ ಓವೈಸಿ ಅವರ ನೇತೃತ್ವದಲ್ಲಿ ಪಕ್ಷವನ್ನು ಇಡೀ ರಾಜ್ಯಾದ್ಯಂತ ಸಂಘಟಿಸಲಾಗುವುದು” ಎಂದು ಹೇಳಿದರು.

“ನಮ್ಮ ಪಕ್ಷದ ಅಜೆಂಡಾ ದೇಶವನ್ನು ಸಾಲ ಮುಕ್ತಗೊಳಿಸುವುದಲ್ಲದೆ, ಪ್ರಮುಖವಾಗಿ ದಾರಿ ತಪ್ಪುತ್ತಿರುವ ಯುವಕರಿಗೆ ಉದ್ಯೋಗ ನೀಡಿ ಮಾದಕ ಮುಕ್ತ ದೇಶವನ್ನಾಗಿಸುವುದು ಹಾಗೂ ಸ್ವಚ್ಛ ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಡಿ.ದೇವರಾಜ ಅರಸು ಜನ್ಮದಿನಾಚರಣೆ

ಕಾರ್ಯಕ್ರಮದಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಂದ ಆಗಮಿಸಿದ್ದ ಪಕ್ಷದ ಜಿಲ್ಲಾ ಅಧ್ಯಕ್ಷರು ಹಾಗೂ ಹೈದರಾಬಾದ್‌ನಿಂದ ಆಗಮಿಸಿದ್ದ ಮುಖಂಡರು, ಮತ್ತು ಕೋಲಾರ ಜಿಲ್ಲಾ ಅಧ್ಯಕ್ಷ ಸಯೈದ್ ನಜೀಬ್ ಪಾಷ, ಜಿಲ್ಲಾ ಜೆನರಲ್ ಸೆಕ್ರೆಟರಿ ಆಗಿ ಮೊಹಮ್ಮದ್ ಎನ್ ಅಲಿ ಸಾಹಿಕ್, ಜಾಯಿಂಟ್ ಸೆಕ್ರೆಟರಿಗಳಾಗಿ ನಾಗರಾಜ್, ಸಿಭಾಗತ್ ಉಲ್ಲಾ, ತಬ್ರೇಜ್ ಖಾನ್,
ಸಿ ವಿ ವರದರಾಜು, ಖಜಾಂಚಿಯಾಗಿ ಮೊಹಮ್ಮದ್ ಮಿನಹಜ್ ಆಲಿ, ಸದಸ್ಯರುಗಳಾಗಿ ಜಮೀರ್ ಪಾಷ ಎನ್, ಸೈಯದ್ ಅದಿಲ್, ಸೈಯದ್ ಅಯೂಬ್ ಪಾಷ, ಶೈಕ್ ಸರ್ದಾರ್ ಹಾಗೂ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X