ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Date:

Advertisements

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಖಾಯಂಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಕೋಲಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿ, ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ತಾಲೂಕು ಅಧ್ಯಕ್ಷೆ ಕಲ್ಪನಾ ಮಾತನಾಡಿ, “ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ” ಎಂದು ಆರೋಪಿಸಿದರು.

“ದೇಶದಲ್ಲಿ 2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆ” ಎಂದು ದೂರಿದರು.

Advertisements

ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, “ಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ” ಎಂದರು.

ಇದನ್ನೂ ಓದಿ: ಕೋಲಾರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ

ಕಾರ್ಯಕರ್ತರಿಗೆ 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಲಕ್ಷ್ಮೀದೇವಿ, ರಾಜಮ್ಮ, ಲೋಕೇಶ್ವರಿ, ಗೌರಮ್ಮ, ತಿಮ್ಮಕ್ಕ, ಅಂಜನಮ್ಮ, ಲಾಲು, ರಾಜಮ್ಮ, ಅನುಸೂಯ, ಮುನಿರತ್ನ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X