ಕೋಲಾರ | ವೆರ್ಗಾ ಕಂಪೆನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

Date:

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟವೆಂದು ತೋರಿಸಿದ್ದು, ಅನಧಿಕೃತವಾಗಿ ಮುಚ್ಚಿರುವುದನ್ನು ತೆರವುಗೊಳಿಸಿ ಕೈಗಾರಿಕೆಯನ್ನು ಮತ್ತೆ ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ಮಾಲೂರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ ಎಂ ವೆಂಕಟೇಶ್ ಮಾತನಾಡಿ, “ಸುಮಾರು 2006ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಕಂಪೆನಿಯು 2019ರಲ್ಲಿ ಜಿಲ್ಲೆಯಲ್ಲಿಯೇ ಅತಿಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್ ಮತ್ತು ಕಪ್ಲರ್ಸ್ 200ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ. ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19ರಲ್ಲಿ ವೆರ್ಗಾ 2, ವೆರ್ಗಾ 3ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019ರ ವೇಳೆ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮಿಷಗಳನ್ನು ನೀಡಿ ಹಂತಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

“ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಟವೆಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ, “ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು” ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲೂಕು ಮುಖಂಡರಾದ ಎಂ ಭೀಮರಾಜ್, ಎನ್ ಎನ್ ಶ್ರೀರಾಮ್, ಎಸ್ ಆಶಾ, ವಿ ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ ವಿ ಮಂಜುನಾಥ್, ಚಿನ್ನಮ್ಮ, ಡಿ ಎಸ್ ವೆಂಕಟರವಣ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...