ಕೋಲಾರ | ತಂದೆಯಿಂದಲೇ ಮಗಳ ಮರ್ಯಾದೆಗೇಡು ಹತ್ಯೆ; ಆರೋಪಿ ಬಂಧನ

Date:

Advertisements

ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ತನ್ನ ತಂದೆಯೇ ಮಗಳನ್ನು ಮರ್ಯಾದೆಗೇಡು ಹತ್ಯೆ ಮಾಡಿ, ಸಮಾಧಿ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮಾರ್ಯಾದೆಗೇಡು ಹತ್ಯೆ ನಡೆದಿದ್ದು, ಬಳಿಕ ಯಾರಿಗೂ ಗೊತ್ತಾಗದಂತೆ ಸಮಾಧಿಯನ್ನೂ ಮಾಡಿದ್ದಾರೆ. ಈ ವಿಚಾರ ಪೊಲೀಸ್‌ ಕಿವಿಗೆ ಬಿದ್ದಿದ್ದರಿಂದ ಜಾತಿರೋಗಪೀಡಿತ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ರಮ್ಯಾ (19) ಎಂಬ ಯುವತಿ ಹತ್ಯೆಗೆ ಒಳಗಾಗಿದ್ದು, ತಂದೆ ವೆಂಕಟೇಶಗೌಡ ಕೊಲೆ ಆರೋಪಿಯಾಗಿದ್ದಾನೆ. ನರಸಾಪುರ ಖಾಸಗಿ ಕಂಪನಿಗೆ ಕೆಲಸಕ್ಕೆ ಹೋಗುವಾಗ ಆಕೆಗೆ ಪರಿಶಿಷ್ಟ ಪಂಗಡದ ಹುಡುಗನೊಂದಿಗೆ ಪ್ರೀತಿಯಾಗಿದೆ. ಈ ಪ್ರೀತಿ ಹಲವು ದಿನ ಮುಂದುವರೆದಿದೆ.

Advertisements

ಪರಿಶಿಷ್ಟ ಪಂಗಡದ ಯುವಕನನ್ನು ಮಗಳು ಪ್ರೀತಿಸಿದ ವಿಷಯ ತಂದೆಗೆ ಗೊತ್ತಾಗಿದೆ. ಈ ಕಾರಣಕ್ಕೆ ತಂದೆ ಮಗಳು ರಮ್ಯಾಳನ್ನು ಕರೆದು ‘ಬುದ್ಧಿ’ ಹೇಳಿದ್ದಾನೆ. ಆದರೆ, ಆಕೆ ತಂದೆಯ ಮಾತನ್ನು ಕಿವಿಗೆ ಹಾಕಿಕೊಳ್ಳದೆ ತನ್ನ ಪ್ರೀತಿಯನ್ನು ಮುಂದುವರಿಸಿದ್ದಾಳೆ.

ಮಗಳ ವಿಚಾರಕ್ಕೆ ಆಕ್ರೋಶಗೊಂಡಿದ್ದ ಪೋಷಕರು ಆಗಸ್ಟ್‌ 25ರಂದು ಮಗಳನ್ನು ಕೊಂದಿದ್ದು, ಎಲ್ಲರೂ ಸೇರಿ ಆಕೆಯ ಅಂತ್ಯಸಂಸ್ಕಾರವನ್ನೂ ಮಾಡಿ ಮುಗಿಸಿದ್ದಾರೆ. ಈ ವಿಚಾರ ಊರಿನ ಕೆಲವರಿಗೆ ಗೊತ್ತಾಗಿ ಗುಸು ಗುಸು ಪ್ರಾರಂಭವಾದ ಬಳಿಕ ಪೊಲೀಸರ ಬಳಿಗೆ ದೂರು ಹೋಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಮ್ಯಾಳ ತಂದೆ ವೆಂಕಟೇಶಗೌಡನನ್ನು ಕರೆದು ವಿಚಾರಣೆಗೊಳಪಡಿಸಿದ್ದಾರೆ. ಬಳಿಕ ವಿಷಯ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮನೆ ಎದುರು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ತಂದೆ, ಮಗನಿಗೆ ಹಲ್ಲೆ; ಉದ್ವಿಗ್ನ ಪರಿಸ್ಥಿತಿ

ಭಾನುವಾರ (ಆಗಸ್ಟ್‌ 27) ಬೆಳಿಗ್ಗೆ ಕೋಲಾರ ತಹಶೀಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಯುವತಿಯ ತಂದೆ ವೆಂಕಟೇಶಗೌಡ, ಮೋಹನ್ ಮತ್ತು ಚೌಡೇಗೌಡ ಎಂಬುವವರನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಕೋಲಾರ ಎಸ್‌ಪಿ ಹಾಗೂ ತಹಶೀಲ್ದಾರ್‌ ಅವರನ್ನು ಸಂಪರ್ಕಿಸಿದೆ. ಆದರೆ, ಅವರು ಕರೆಗೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X