ಕೋಲಾರ | ವೈದ್ಯನ ಬೇಜವಾಬ್ದಾರಿತನ: ಇಂಜೆಕ್ಷನ್ ಪಡೆದ ಯುವಕ ಸಾವು

Date:

Advertisements

ಜ್ವರದಿಂದ ನರಳುತ್ತಿದ್ದ ಯುವಕನಿಗೆ ಖಾಸಗಿ ಕ್ಲಿನಿಕ್‌ ವೈದ್ಯ ಇಂಜೆಕ್ಷನ್‌ ನೀಡಿದ್ದು, ಇಂಜೆಕ್ಷನ್ ಪಡೆದ ಕೆಲವೇ ಸಮಯದಲ್ಲಿ ಯುವಕ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ವಕ್ಕಲೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯುವಕ ನಾಗೇಂದ್ರಬಾಬು ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಶುಕ್ರವಾರ ಸಂಜೆ ಜ್ವರ ಹೆಚ್ಚಾದ ಕಾರಣ ಗ್ರಾಮದಲ್ಲೇ ಇದ್ದ ‘ಸನ್‌ರೈಸ್’ ಕ್ಲಿನಿಕ್‌ಗೆ ತೆರಳಿ ಇಂಜೆಕ್ಷನ್ ಪಡೆದಿದ್ದಾರೆ. ಆದರೆ, ಇಂಜೆಕ್ಷನ್ ಪಡೆದ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ.

ನಾಗೇಂದ್ರಬಾಬುಗೆ ಇಂಜೆಕ್ಷನ್ ನೀಡಿದ ವೈದ್ಯ ಆಯುರ್ವೇದದಲ್ಲಿ ವೈದ್ಯಕೀಯ ಪಡೆದಿದ್ದಾರೆ. ಅವರು ಆಯುರ್ವೇದ ಚಿಕಿತ್ಸೆಯನ್ನು ಮಾತ್ರವೇ ನೀಡಬೇಕು. ಆದರೆ, ಆ ವೈದ್ಯ ಆಲೋಪತಿ ಚಿಕಿತ್ಸೆಯನ್ನೂ ನೀಡುತ್ತಿದ್ದರು. ಅಭ್ಯಾಸ ಮಾಡಿದ್ದ ವೃತ್ತಿಯೇ ಬೇರೆ, ಚಿಕಿತ್ಸೆ ನೀಡುತ್ತಿದ್ದ ವಿಧಾನವೇ ಬೇರೆಯಾಗಿದ್ದ ಕಾರಣದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

Advertisements

ಇಂಜೆಕ್ಷನ್‌ ಪಡೆದ ನಾಗೇಂದ್ರಬಾಬುಗೆ ಕೆಲವೇ ಸಮಯದಲ್ಲಿ ಮೂರ್ಚೆ ಬಂದಿದೆ. ಬಳಿಕ, ಹೃದಯ ಬಡಿತವು ಕಡಿಮೆಯಾಗಲಾರಂಭಿಸಿದೆ. ಕೂಡಲೇ ಅವರನ್ನು ಕೋಲಾರ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯ ಸೂಚಿಸಿದ್ದಾರೆ. ನಾಗೇಂದ್ರಬಾಬು ಅವರನ್ನು ಕೋಲಾರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಆಯುರ್ವೇದದಲ್ಲಿ ಅಭ್ಯಾಸ ಮಾಡಿ, ಆಲೋಪತಿ ಚಿಕಿತ್ಸೆ ನೀಡುತ್ತಿರುವ ವೈದ್ಯ ರಫೀಕ್‌ನ ಪರವಾನಗಿಯನ್ನು ರದ್ದುಗೊಳಿಸಬೇಕು. ಆತ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಚಿಕಿತ್ಸೆ ನೀಡದಂತೆ ನಿರ್ಬಂಧ ವಿಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವೈದ್ಯನ ವಿರುದ್ಧ ಯುವಕನ ಸಂಬಂಧಿಕರು ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು, ವಕ್ಕಲೇರಿಯಲ್ಲಿ ಸರ್ಕಾರಿ ಪ್ರಾಥಮಿಕ ಕೇಂದ್ರವೂ ಇದ್ದು. ಆ ಆಸ್ಪತ್ರೆಗೆ ಸರಿಯಾಗಿ ವೈದ್ಯರು ಬರುತ್ತಿಲ್ಲ. ನಿಯಮಿತವಾಗಿ ವೈದ್ಯರು ಬರುವಂತೆ ಆಯೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿರುವ ಆ್ಯಂಬುಲೆನ್ಸ್‌ ಕೆಟ್ಟಿದ್ದು, ಅದನ್ನು ರಿಪೇರಿ ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X