ಕೋಲಾರ | ಬಾಲಕನ ಮೇಲೆ ನಾಯಿಗಳ ದಾಳಿ; ಪ್ರಾಣಾಪಾಯದಿಂದ ಬಾಲಕ ಪಾರು

Date:

ಕೋಲಾರದ ರಹಮತ್‌ ನಗರದಲ್ಲಿ ಗುರುವಾರ ರಾತ್ರಿ ಬೀದಿನಾಯಿಗಳು ಬಾಲಕನನ್ನು ಅಟ್ಟಾಡಿಸಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನಿಗೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ರಹಮತ್‌ ನಗರದ ಬಾಬು ಎಂಬುವರ ಪುತ್ರ ಜಾಫರ್‌(9)ನನ್ನು ಪೊಲೀಸರು ರಕ್ಷಿಸಿ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕುತ್ತಿಗೆ, ಕಿವಿ, ಎದೆ, ಬೆನ್ನು ಹಾಗೂ ತೊಡೆಗೆ ತೀವ್ರ ಗಾಯವಾಗಿದ್ದು, ಬಾಲಕ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

“ಗುರುವಾರ ರಾತ್ರಿ ಐದಾರು ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ 112 ವಾಹನದಲ್ಲಿ ಗಸ್ತಿನಲ್ಲಿದ್ದ ಕಾನ್‌ಸ್ಪೆಬಲ್‌ ಎಚ್‌.ರಾಜಣ್ಣ ನಾಯಿಗಳನ್ನು ಓಡಿಸಿ ಮಗುವನ್ನು ಜಿಲ್ಲಾಸ್ಪತ್ರೆಗೆ ಸೇರಿದ್ದಾರೆ. ಬಾಲಕ ಅಪಾಯದಿಂದ ಪಾರಾಗಿದ್ದಾನೆ” ಎಂದು ಗಲ್‌ಪೇಟೆ ಪಿಎಸ್‌ಐ ಅರುಣ್‌ ಗೌಡ ಪಾಟೀಲ್‌ ತಿಳಿಸಿದ್ದಾರೆ. ಕಾನ್‌ಸ್ಟೆಬಲ್‌ ರಾಜಣ್ಣ ಹಾಗೂ ವಾಹನದ ಚಾಲಕ ಡಿಎಆರ್‌ನ ಮಂಜುನಾಥ್‌ ಶೆಟ್ಟಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾತ್ರಿ ವಾಹನದಲ್ಲಿ ಶ್ರೀನಿವಾಸಪುರ ವೃತ್ತದಿಂದ ಅರಹಳ್ಳಿ ಕಡೆ ಗಸ್ತು ತಿರುಗುವಾಗ ಕಿರುಚಿದ ಶಬ್ದ ಬಂತು. ಅದೇ ರಸ್ತೆಯಲ್ಲಿ ಮುಂದೆ ಹೋಗಿದ್ದೆವು. ಶಬ್ದ ಏನಿರಬಹುದೆಂದು ಕುತೂಹಲದಿಂದ ಹಿಂತಿರುಗಿ ಬಂದೆವು” ಎಂದು ಕಾನ್‌ಸ್ಟೆಬಲ್‌ ರಾಜಣ್ಣ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆನೆ ‘ಸುವರ್ಣ’ಗೆ ಸಿಸೇರಿಯನ್‌ ಹೆರಿಗೆ; ಗರ್ಭದಲ್ಲೇ ಮೃತಪಟ್ಟಿದ್ದ ಮರಿ

“ನಾಯಿಗಳು ಬಾಲಕನ ಬಟ್ಟೆ ಹರಿದು ಹಾಕಿದ್ದವು. ಕುತ್ತಿಗೆಯಿಂದ ರಕ್ತ ಬರುತಿತ್ತು. ತಕ್ಷಣವೇ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದೆವು. ಬಳಿಕ ರಾತ್ರಿ ಕರ್ತವ್ಯದಲ್ಲಿದ್ದ ಡಾ.ಕೆ.ಎಂ ವರ್ಣಶ್ರೀ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಶುಕ್ರವಾರ ಬೆಳಿಗ್ಗೆ ಬಾಲಕನಿಗೆ ಪ್ರಜ್ಞೆ ಬಂದಿದೆ. ತಂದೆ ಹೆಸರು, ಮನೆ ವಿಳಾಸ, ಮೊಬೈಲ್‌ ಸಂಖ್ಯೆ ನೀಡಿದ್ದಾನೆ” ಎಂದು ರಾಜಣ್ಣ ತಿಳಿಸಿದರು.

ಬಾಲಕ ರಕ್ಷಣೆ ವೇಳೆ ಕಾನ್‌ಸ್ಟೆಬಲ್‌ ರಾಜಣ್ಣ ಅವರ ಮೇಲೂ ನಾಯಿಗಳು ದಾಳಿ ನಡೆಸಿವೆ. ಲಾಟಿ ಹಾಗೂ ಕಲ್ಲಿನ ಸಹಾಯದಿಂದ ಬೀದಿನಾಯಿಗಳನ್ನು ಓಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...