ಕೋಲಾರ | ಶಾಂತಿಯುತ ಈದ್ ಮಿಲಾದ್ ಆಚರಣೆಗೆ ಡಿವೈಎಸ್‌ಪಿ ಸೂಚನೆ

Date:

Advertisements

ಮುಸ್ಲಿಂ ಸಮುದಾಯದ ಪವಿತ್ರ ಈದ್ ಮಿಲಾದ್ ಹಬ್ಬದವನ್ನು ಕೋಲಾರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಆಚರಣೆ ಮಾಡಲು ಡಿವೈಎಸ್‌ಪಿ ಹುಮಾಯೂನ್‌ ನಾಗ್ತೆ ಸೂಚಿಸಿದರು.

ನಗರದ ಶತಶೃಂಗ ಭವನದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಕೋಆರ್ಡಿನೇಟ್ ಸಭೆ ನಡೆಸಿ ಮಾತನಾಡಿದ ಅವರು, “ಈದ್ ಮಿಲಾದ್ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಕಾನೂನು ರೀತಿಯಲ್ಲಿ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಹೈಕೋರ್ಟ್ ಆದೇಶವನ್ನು ತಿಳಿಸಿ ನಿಯಮಾನುಸಾರ ಆಚರಣೆಗೆ ಸಮುದಾಯದ ಮುಖಂಡರು ಸಹಕರಿಸಬೇಕು ಎಂದು ತಿಳಿಸಲಾಗಿದೆ. ಆದೇಶದಂತೆ ಡಿಜೆ ಬಳಕೆಗೆ ಯಾವುದೇ ರೀತಿಯ ಅನುಮತಿ ಇರುವುದಿಲ್ಲ. ಬ್ಯಾನರ್ ಕಟ್ಟಲು ನಗರಸಭೆ ಆಯುಕ್ತರ ಬಳಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪೊಲೀಸ್‌ ಇಲಾಖೆಯ ಸಂಪೂರ್ಣ ಸ‌ಹಕಾರದೊಂದಿಗೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ” ಎಂದು ತಿಳಿಸಿದರು.

ಕೋಲಾರ ಟೌನ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸದಾನಂದ ಮಾತನಾಡಿ, “ಶಾಂತಿಯುತವಾಗಿ ಎಲ್ಲರೂ ಮಿಲಾದ್ ಹಬ್ಬವನ್ನು ಆಚರಿಸಿ. ಹೈಕೋರ್ಟ್ ಆದೇಶದಂತೆ ಗಣೇಶ ಹಬ್ಬಕ್ಕೂ ಡಿಜೆಗೆ ಅನುಮತಿ ಕೊಟ್ಟಿಲ್ಲ. ಅದೇ ರೀತಿ ಮಿಲಾದ್ ಹಬ್ಬಕ್ಕೂ ಡಿಜೆಗೆ ಅವಕಾಶ ಕೊಡುವುದಿಲ್ಲ. ಕಾನೂನಿದ ಅಡಿಯಲ್ಲಿ ಎಲ್ಲರೂ ಸೇರಿ ಹಬ್ಬ ಆಚರಿಸಿ” ಎಂದರು.

WhatsApp Image 2025 09 02 at 10.12.45 AM

ಹಲವಾರು ಮುಸ್ಲಿಂ ಸಮುದಾಯದ ಮುಖಂಡರು ಮಾತನಾಡಿ, ಮೊಹಮ್ಮದ್ ಪೈಗಂಬರ್ ಅವರ 1500ನೇ ಹುಟ್ಟು ಹಬ್ಬ ಆಗಿದ್ದು, ನಾವು ವಿಜೃಂಭಣೆಯಿಂದ ಆಚರಣೆ ಮಾಡಬೇಕಾಗಿದೆ. ಪೊಲೀಸರಿಗೆ ಅಗತ್ಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.‌

ಇದನ್ನೂ ಓದಿ: ಕೋಲಾರ | ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆ: ಚೆಲುವನಹಳ್ಳಿ ನಾಗರಾಜ್

ಈ ಸಂದರ್ಭದಲ್ಲಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಕಾಂತರಾಜು, ಟ್ರಾಫಿಕ್ ಇನ್ಸ್ಪೆಕ್ಟರ್ ಲೊಕೇಶ್,‌ ಗಲ್ ಕಾಂತರಾಜು, ಪೇಟೆ ಪೊಲೀಸ್ ಇನ್ಸ್ಪೆಕ್ಟರ್ ವಿಠಲ್, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಹಲವಾರು ಸಂಘಟನೆಗಳ ಯುವಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X