ಕೋಲಾರ | ಜಮಾಅತೆ ಇಸ್ಲಾಮಿ ಹಿಂದ್‌ ವತಿಯಿಂದ ಸೆ.3 ರಿಂದ ಹತ್ತು ದಿನಗಳ ಸೀರತ್ ಅಭಿಯಾನ

Date:

ಕೋಲಾರ ಜಿಲ್ಲಾ ಜಮಾತೆ ಇಸ್ಲಾಮೀ ಹಿಂದ್ ವತಿಯಿಂದ ʼನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ʼ ಎಂಬ ಧ್ಯೇಯ ವಾಕ್ಯದಡಿ ಅವರ ಸಾರ್ವಕಾಲಿಕ ಬೋಧನೆಗಳನ್ನು ಹಾಗೂ ಪ್ರವಾದಿ ಜೀವನ ಸಂದೇಶ ಅಭಿಯಾನವನ್ನು ಜನತೆಗೆ
ತಿಳಿಸಲು ಸೆಪ್ಟೆಂಬರ್ 3‌ (ನಾಳೆ)ರಿಂದ ಅಕ್ಟೋಬರ್ 14 ರವರೆಗೆ 10 ದಿನಗಳ ಸೀರತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು
ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಅಮ್ಜದ್ ಅಲಿ ತಿಳಿಸಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, “ರಾಜ್ಯಾದ್ಯಂತ ನಡೆಯಲಿರುವ ಈ ಅಭಿಯಾನದಲ್ಲಿ ಪ್ರವಾದಿಯವರ ಕುರಿತು ಪುಸ್ತಕ ಬಿಡುಗಡೆ, ಕಿರು ಹೊತ್ತಿಗೆ ವಿತರಣೆ, ವಿಚಾರಗೋಷ್ಟಿ, ಸಮಾವೇಶಗಳು, ಪ್ರಬಂಧ ಸ್ಪರ್ಧೆ, ರಕ್ತದಾನ ಶಿಬಿರ, ಶುಚಿತ್ವ ಅಭಿಯಾನ, ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮ ಭೇಟಿ, ರೋಗಿಗಳಿಗೆ ಹಣ್ಣು ಹಂಪಲು ವಿತರಣೆಯಂತಹ ಸಮಾಜ ಸೇವಾ ಚಟುವಟಿಕೆಗಳು ಹಾಗೂ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಲ್ಪಸಂಖ್ಯಾತರ ಸಮುದಾಯದ ಮುಖಂಡ ಅನ್ವರ್ ಪಾಷ ಮಾತನಾಡಿ, “ಪ್ರವಾದಿ ಮುಹಮ್ಮದ್ ರವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮೀಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ. ಪರಸ್ಪರ ತಪ್ಪುಕಲ್ಪನೆಗಳು, ಪೂರ್ವಗ್ರಹಗಳು, ದ್ವೇಷದ ವಾತಾವರಣವನ್ನು ನಿವಾರಿಸಿ ಶಾಂತಿ, ಸಹಬಾಳ್ವೆ ಪರಸ್ಪರರನ್ನು ಅರಿಯುವಂತಹ ಉದ್ದೇಶದಿಂದ ಜಮಾತೆ ಇಸ್ಲಾಮಿ ಹಿಂದ್ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜನತೆಯ ಸಹಕಾರವನ್ನು ಕೋರಲಾಗಿದೆ” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕೋಲಾರ | ಭೀಮ ಪ್ರಜಾ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಮಾಜಿ ಅಧ್ಯಕ್ಷ  ಮುಬಾರಕ್ ಬಾಗ್ಬಾನ್, ತಾಲೂಕು ಅಧ್ಯಕ್ಷ ಅಜ್ಮಲ್ ಖದೀರ್, ‌ಖಜಾಂಜಿ ರುಹುಲ್ಲಾ ಬೇಗ್ ಹಾಗೂ ಜಮಾತೆ ಇಸ್ಲಾಮಿ ಹಿಂದ್ ನ ಸದಸ್ಯರುಗಳಾದ ನಗರ ಸಭೆ ಮಾಜಿ ಸದಸ್ಯ ಸಲಾವುದ್ದೀನ್ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಅಪ್ರೋಜ್, ಅಮ್ಜದ್, ಮುಜಾಮುಲ್, ಅಯುಬ್ ಖಾನ್, ನಫೀಜ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...