ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

Date:

Advertisements

ಬೀದಿ ರಂಪಾಟ ಮಾಡಿದ ತಪ್ಪನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕಾಂಗ್ರೆಸ್ ಶಾಸಕರ ವಿರುದ್ಧ ಆರೋಪ ಮಾಡುತ್ತಿರುವ ಸಂಸದ ಎಸ್ ಮುನಿಸ್ವಾಮಿ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್‍ನಿಂದಲೂ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ ಲಕ್ಷ್ಮಿನಾರಾಯಣ ಎಚ್ಚರಿಕೆ ನೀಡಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುನಿಸ್ವಾಮಿ ಸಂಸದರಾಗಿ ಆಯ್ಕೆಯಾಗಿ 4 ವರ್ಷ ಪೂರೈಸಿದ್ದಾರೆ. ರೈತರು, ಮಹಿಳೆಯರು ಮತ್ತು ವಿದ್ಯಾರ್ಥಿಗಳ ಪರ ಯಾವತ್ತೂ ಹೋರಾಟ ಮಾಡಲಿಲ್ಲ. ಈಗ ವೈಯಕ್ತಿಕ ಕಾರಣಕ್ಕೆ ಬಿಜೆಪಿಯನ್ನು ಬಳಕೆ ಮಾಡಿಕೊಂಡಿದ್ದು, ಅನುಚಿತವಾಗಿ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದರು.

“ಯುವಕರಲ್ಲಿ ಹಿಂದುತ್ವ ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮೆದುಳಿಗೂ ಹಾಗೂ ನಾಲಿಗೆಗೂ ಸಂಪರ್ಕವೇ ಇಲ್ಲ. ಮತ್ತೆ ಅಧಿಕಾರಕ್ಕೆ ಬರಲು ಇಂಥ ಗೊಂದಲ ಸೃಷ್ಟಿಸುತ್ತಿದ್ದಾರೆ‌” ಎಂದರು.

Advertisements

“ಜನತಾ ದರ್ಶನದಲ್ಲಿ ಮುನಿಸ್ವಾಮಿ ನಡವಳಿಕೆ ನಗೆಪಾಟಲಿಗೀಡಾಗಿದೆ. ಸಾರ್ವಜನಿಕರ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಯಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಅರಿವೇ ಅವರಿಗೆ ಇಲ್ಲ.  ಇಂತಹ ಸಂಸದರು ಬಿಜೆಪಿಗೆ ಕಳಂಕ” ಎಂದು ಆರೋಪಿಸಿದರು.

“ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಕೆ ಎಚ್ ಮುನಿಯಪ್ಪ, ರಮೇಶ್‌ ಕುಮಾರ್‌ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಮುಖಂಡರುಗಳಾದ ಸಿ ಟಿ ರವಿ, ಮುನಿಸ್ವಾಮಿ, ಸದಾನಂದಗೌಡ, ಎನ್‌ ರವಿ ಕುಮಾರ್‌ ಆರೋಪ ಮಾಡಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಏಕೆ ತನಿಖೆ ನಡೆಸಿ ಕ್ರಮ ವಹಿಸಲಿಲ್ಲ?” ಎಂದು ಕಿಡಿಕಾರಿದರು.

“ಮುನಿಸ್ವಾಮಿ ಅವರನ್ನು ಕೋಲಾರದ ಜನ ಎಂದಿಗೂ ಕ್ಷಮಿಸುವುದಿಲ್ಲ, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ನಾರಾಯಣ ಇಲ್ಲಿಗೆ ವರ್ಗಾವಣೆಯಾಗಿ ಬಂದರೇ ಹೊರತು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಲ್ಲ” ಎಂದರು.

ಜಿಲ್ಲಾ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್‌ ಮಾತನಾಡಿ, “‘ಕಾಂಗ್ರೆಸ್ ಶಾಸಕರನ್ನು ಭೂಗಳ್ಳರೆಂದು ಹೇಳಿಕೆ ನೀಡಿ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಯಾಗಲು ಮುನಿಸ್ವಾಮಿ ಅವರೇ ಕಾರಣರಾದರು. ಆ ಸಂದರ್ಭದಲ್ಲಿ ಉಂಟಾದ ಗದ್ದಲವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ ನಾರಾಯಣ ಬಹಳ ಮುತುವರ್ಜಿಯಿಂದ ನಿಭಾಯಿಸಿದ್ದಾರೆ. ಇಂಥ ಅಧಿಕಾರಿಯನ್ನು ಕಾಂಗ್ರೆಸ್ ಏಜೆಂಟ್‌ ಎಂಬುದಾಗಿ ಹೇಳಿರುವ ಸಂಸದರಿಗೆ ನಾಚಿಕೆಯಾಗಬೇಕು. ಬಿಜೆಪಿಯವರ ರೀತಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್‍ಗೆ ಇಲ್ಲ” ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪತ್ನಿಗೆ ಮಾತ್ರವಲ್ಲ, ತಂದೆಗೂ ವಿಮೆ ಹಣ ನೀಡುವಂತೆ ಗ್ರಾಹಕ ಆಯೋಗ ತೀರ್ಪು

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೆ ಜಯದೇವ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯ್ ಶಂಕರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಕೆಪಿಸಿಸಿ ಒಬಿಸಿ ಕಾರ್ಯದರ್ಶಿ ಮಂಜುನಾಥ್, ಡಿಸಿಸಿ ಬ್ಯಾಂಕ್‌ ನಾಮನಿರ್ದೇಶಿತ ನಿರ್ದೇಶಕ ಎಲ್ ಎ ಮಂಜುನಾಥ್, ಬಿ ಟಿ ಮಂಜುನಾಥ್, ರಾಮಯ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X