ಕೋಲಾರ | ರಾಜಕೀಯ ಏನೇ ಇದ್ದರೂ ಸ್ನೇಹ, ವಿಶ್ವಾಸ ಮುಖ್ಯ- ಶಾಸಕ ಕೊತ್ತೂರು ಮಂಜುನಾಥ್

Date:

ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು

- Advertisement -

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಇಂದು ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ಕೆಂಪೇಗೌಡರ ಆಶೀರ್ವಾದವೇ ಕಾರಣ. ದೇಶದಲ್ಲಿ ಗಾಂಧೀಜಿ, ನೆಹರು, ಬಾಬಾಸಾಹೇಬ್ ಅಂಬೇಡ್ಕರ್ ಇಂತಹ ಹಲವಾರು ಮಹನೀಯರನ್ನು ನಾವು ನೆನೆಯುತ್ತೇವೆ. ರಾಜಕೀಯದಲ್ಲಿ ಸಾವಿರ ಭಿನ್ನಾಭಿಪ್ರಾಯಗಳಿದ್ದರೂ ಸ್ನೇಹ ಮತ್ತು ವಿಶ್ವಾಸ ಮುಖ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

​ಕೆಂಪೇಗೌಡರು ಬೆಂಗಳೂರನ್ನು ಕನ್ನಡಿಯಂತೆ ಅಚ್ಚುಕಟ್ಟಾಗಿ ನಿರ್ಮಿಸಿದ್ದಾರೆ. ಮೈಸೂರು ಮಹಾರಾಜರಂತೆ ಅವರೂ ಅನೇಕ ಕೆರೆಗಳನ್ನು ಕಟ್ಟಿಸಿದ್ದಾರೆ. ಆದರೆ ಇಂದು ನಾವು ಕೆರೆಗಳನ್ನು ಮುಚ್ಚುತ್ತಿದ್ದೇವೆ. ಕೆರೆ ಎಂದರೆ ತಾಯಿಯ ಗರ್ಭ ಇದ್ದಂತೆ. ಮಹನೀಯರು ನಮಗಾಗಿ ಆಸ್ತಿ, ಬದುಕು ಕಟ್ಟಿಕೊಟ್ಟರೆ, ಇಂದು ಊರಿನಲ್ಲಿ ರಸ್ತೆ ಮಾಡಲು ಹೋದರೆ ನಮ್ಮ ಜಾಗ ಎಂದು ಗಲಾಟೆ ಮಾಡುತ್ತಾರೆ, ಸರ್ಕಾರಿ ಜಾಗದಲ್ಲೂ ಕೆಲಸ ಮಾಡಲು ಬಿಡುವುದಿಲ್ಲ. ನಾವೆಲ್ಲವನ್ನೂ ಮರೆತುಹೋಗಿದ್ದು, ಇರುವ ಸಂಪತ್ತನ್ನು ಕಾಪಾಡಿಕೊಂಡರೆ ಸಾಕು” ಎಂದು ವಿಷಾದ ವ್ಯಕ್ತಪಡಿಸಿದರು.

​ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಂ.ಎಲ್.ಸಿ ಅನಿಲ್ ಕುಮಾರ್ ನಾಡನ್ನು ಆಳುವ ಜವಾಬ್ದಾರಿ ವಹಿಸಿಕೊಂಡ ಕೇವಲ ಆರು ವರ್ಷಗಳಲ್ಲೇ ಕೆಂಪೇಗೌಡರು ಬೆಂಗಳೂರು ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರು ಯಾವ ಶುಭ ಗಳಿಕೆಯಲ್ಲಿ ಅಡಿಪಾಯ ಹಾಕಿದರೋ ಏನೋ, ಇಂದು ಬೆಂಗಳೂರು ಇಡೀ ಪ್ರಪಂಚವೇ ತಿರುಗಿ ನೋಡುವಂತಹ ಬೃಹತ್ ನಗರವಾಗಿ ಬೆಳೆದಿದೆ. ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ವಾಣಿಜ್ಯ ಹಾಗೂ ಹೈಟೆಕ್ ನಗರವಾಗಿ ಬೆಂಗಳೂರು ಹೊರಹೊಮ್ಮಲು ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಶ್ಲಾಘಿಸಿದರು.

2011ರಲ್ಲಿ ಕೋಲಾರದಲ್ಲಿ ಲಕ್ಷಾಂತರ ಜನಸ್ತೋಮದೊಂದಿಗೆ ಐತಿಹಾಸಿಕವಾಗಿ ಕೆಂಪೇಗೌಡ ಜಯಂತಿ ಆಚರಿಸಲಾಗಿತ್ತು. ಅಂದಿನ ಕಾರ್ಯಕ್ರಮದಲ್ಲಿ ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಆರ್. ಅಶೋಕ್ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿ ಭಾಗವಹಿಸಿದ್ದರು. ಅಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಹಕಾರದೊಂದಿಗೆ ಈ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಮಾಡಲು ಬೇಡಿಕೆ ಇಟ್ಟಿದ್ದೆವು, ಅದರಂತೆ ಇಂದು ರಾಜ್ಯದ ಮೂಲೆ ಮೂಲೆಗಳಲ್ಲೂ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ಕೆಂಪೇಗೌಡರ ಹೆಸರು ಶಾಶ್ವತವಾಗಿರಲೆಂದೇ ಬಸ್ ನಿಲ್ದಾಣ ಮತ್ತು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಲಾಗಿದೆ. ಒಕ್ಕಲಿಗ ಸಮುದಾಯದ ಹೆಚ್.ಡಿ. ದೇವೇಗೌಡರು ದೇಶದ ಪ್ರಧಾನಿಯಾಗಿದ್ದರು. ಕೆಂಪೇಗೌಡರಂತೆ ಎಲ್ಲಾ ಸಮುದಾಯವನ್ನು ಸಮಾನವಾಗಿ ಕಂಡು, ಜಾತ್ಯತೀತ ನಾಯಕರಾಗಿ ಹೊರಹೊಮ್ಮಿದಾಗ ಮಾತ್ರ ನಿಜವಾದ ನಾಯಕ ಎನಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ ಹಿಂದೆ ಅಂಬೇಡ್ಕರ್, ಗಾಂಧೀಜಿ,ಮತ್ತು ಬಸವಣ್ಣನವರ ಜಯಂತಿಗೆ ಮಾತ್ರವೇ ಸೀಮಿತವಾಗಿತ್ತು ಕೋಲಾರದಲ್ಲಿ ಮೊಟ್ಟಮೊದಲ ಬಾರಿಗೆ ಕೆಂಪೇಗೌಡ ಜಯಂತಿಯನ್ನು ಪ್ರಾರಂಭ ಮಾಡಿದ್ದರ ಭಾಗವಾಗಿ ರಾಜ್ಯಾದ್ಯಂತ ಆಚರಣೆ ಮಾಡುವಂತೆ ಮಾಡಿದ್ದಾರೆ ಕೋಲಾರದಲ್ಲಿ ಹಿಂದೆ ಒಂದು ನಿವೇಶನ ಇತ್ತು ಅದರಲ್ಲಿ ಹಾಸ್ಟೆಲ್ ಮಾಡಿದ್ದರು ಇವತ್ತು ಅದರ ಜೊತೆಗೆ ಕೆಂಪೇಗೌಡ ಮಾಲ್ ಸಹ ಕಟ್ಟಲು ಮುಂದಾಗಿದ್ದು ಅದಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದೆ ಅದರಿಂದ ಬರುವ ಅದಾಯವನ್ನು ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಬಳಸಲಾಗುತ್ತದೆ ಬೈರೇಗೌಡ ನಗರದಲ್ಲಿ ಇರುವ ಜಾಗದಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್ ಮುಂದಾಗಿದ್ದೇವೆ ಎಲ್ಲಾ ಜಾತಿ ಸಮುದಾಯದವರು ಸೇರಿ ಈ ಜಯಂತಿ ಆಚರಣೆ ಮಾಡಲಾಗಿದೆ ಇದು ಅವರ ಎಲ್ಲಾ ಸಮುದಾಯಕ್ಕೆ ನೀಡಿದ ಸೇವೆಯೇ ಕಾರಣವಾಗಿದೆ ಎಂದರು

​ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಗಾನಂದ ಕೆಂಪರಾಜು ಅವರು ವಿಶೇಷ ಉಪನ್ಯಾಸ ನೀಡಿದರು ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಂಕರಪ್ಪ ಮಾತನಾಡಿದರು.

ಇದನ್ನು ಓದಿದ್ದೀರಾ..?ಕೋಲಾರ | ಕೋಲಾರದ ಕೆಂಪೇಗೌಡರ ಜಯಂತಿ ಇಡೀ ರಾಜ್ಯಕ್ಕೆ ಮಾದರಿ: ಶ್ರೀ ಮಂಗಳನಂದನಾಥ ಸ್ವಾಮೀಜಿ

​ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ತಹಶೀಲ್ದಾರ್ ಶ್ರೀನಿವಾಸ್, ಉಪವಿಭಾಗಾಧಿಕಾರಿ ರೇಣುಕಾಪ್ರಸಾದ್ ಜಂಬಗಿ ಉಪಸ್ಥಿತರಿದ್ದರು. ಒಕ್ಕಲಿಗ ಸಮುದಾಯದ ಮುಖಂಡರಾದ ಬಿಸಪ್ಪಗೌಡ, ಕಲ್ಲಂಡೂರು ಲೋಕೇಶ್, ಡಾ. ರಮೇಶ್, ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್, ವಕ್ಕಲೇರಿ ರಾಮು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರುಳಿ, ಖಾಜಿಕಲ್ಲಹಳ್ಳಿ ಮುನಿರಾಜು, ಅಪ್ಸರ್, ಎಸ್‌.ಕೆ. ಚಂದ್ರಶೇಖರ್, ವಿ.ಮುನಿರಾಜು, ಮೊಹಮ್ಮದ್ ಹನೀಫ್, ವೈ. ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿಜಯಲಕ್ಷ್ಮಿ ಸೇರಿದಂತೆ ನೂರಾರು ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...