ಕೋಲಾರ | ʼಅಕ್ಕʼ ವಿಶ್ವ ಕನ್ನಡ ಸಮ್ಮೇಳನದಲ್ಲಿ ಗೋ.ನಾ.ಸ್ವಾಮಿ ಗಾಯನ

Date:

Advertisements

ಅಮೇರಿಕಾದ ರಿಚ್‌ಮಂಡ್‌ ನಗರದಲ್ಲಿ 3 ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಅಕ್ಕ ಸಮ್ಮೇಳದಲ್ಲಿ ಕೋಲಾರ ಜಿಲ್ಲೆಯವರಾದ ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ ಅವರು ಭಾಗವಹಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕೋಲಾರ ತಾಲೂಕಿನ ಸುಗಟೂರು ಗ್ರಾಮದವರಾದ ಗೋ.ನಾ ಸ್ವಾಮಿ ಅವರು ಅಮೇರಿಕಾದಲ್ಲಿ ಆಯೋಜಿಸಿರುವ 12ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಜಾನಪದ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಗೋ.ನಾ.ಸ್ವಾಮಿ 1
ಅಂತರಾಷ್ಟ್ರೀಯ ಕಲಾವಿದ ಗೋ.ನಾ.ಸ್ವಾಮಿ

ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್‌ 1ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಲಾತಂಡಗಳು ಸಮ್ಮೇಳನದಲ್ಲಿ ಭಾಗವಹಿಸಲಿವೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾಗಿ ನಂದಕುಮಾರ್: ಕಾರ್ಯಕರ್ತರಲ್ಲಿ ಸಂಭ್ರಮ

ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್‌ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ, ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ಬಗೆಬಗೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಕ್ಕ ಸಮ್ಮೇಳನದಲ್ಲಿ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು, ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಖ್ಯಾತ ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X