ಕೋಲಾರ | ದೇವಾಲಯಗಳಲ್ಲಿ ಎಲ್ಲ ಜಾತಿ-ಧರ್ಮದವರಿಗೂ ಮುಕ್ತ ಪ್ರವೇಶ

Date:

Advertisements

ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಾಲಯಗಳಲ್ಲಿ ಎಲ್ಲ ಜಾತಿ, ಧರ್ಮದವರಿಗೂ ಮುಕ್ತ ಪ್ರವೇಶ ಕಲ್ಪಿಸುವ ಅಭಿಯಾನ ನಡೆಯುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಅಭಿಯಾನ ಆರಂಭವಾಗಿದ್ದು, ಜಿಲ್ಲೆಯ 1,351 ದೇವಾಲಯಗಳ ಪೈಕಿ 507 ದೇವಾಲಯಗಳಲ್ಲಿ ‘ಎಲ್ಲರಿಗೂ ಮುಕ್ತ ಪ್ರವೇಶ’ದ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.

ಇಲಾಖೆಯ ಅಧೀನದಲ್ಲಿರುವ ಜಿಲ್ಲೆಯ ‘ಎ’ ಮತ್ತು ‘ಬಿ’ ದರ್ಜೆಯ ಎಲ್ಲ ದೇವಾಲಯಗಳಲ್ಲಿ ಫಲಕ ಅಳವಡಿಸಲಾಗಿದೆ. ಇನ್ನು, ‘ಸಿ’ ದರ್ಜೆಯ 844 ದೇವಾಲಯಗಳಿಗೆ ಫಲಕ ಅಳವಡಿಕೆ ಬಾಕಿ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ರಾಜ್ಯಾದ್ಯಂತ ದಲಿತರು ಮತ್ತು ಇತರ ಪರಿಶಿಷ್ಟ ಜನಾಂಗದವರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕಂದು ಪ್ರತಿಭಟನೆಗಳು ನಡೆಯುತ್ತಿವೆ. ಹಲವೆಡೆ ದಲಿತರು ದೇವಾಲಯ ಪ್ರವೇಶಕ್ಕೆ ಯತ್ನಿಸಿದ್ದು, ಹಲವೆಡೆ ಸಫಲರಾಗಿದ್ದಾರೆ. ಇನ್ನೂ ಹೆಚ್ಚಿನ ಸಂದರ್ಭಗಳಲ್ಲಿ ಪ್ರಬಲ ಜಾತಿಗರು ದಲಿತರ ಮೇಲೆ ದಾಳಿ ಮಾಡಿರುವ ಘಟನೆಗಳು ನಡೆದಿವೆ. ಇತ್ತೀಚೆಗೆ, ಉಳ್ಳೇರಹಳ್ಳಿ ದೇವಲಾಯದಲ್ಲಿ ದಲಿತ ಬಾಲಕ ಗುಜ್ಜಕೋಲು ಮುಟ್ಟಿದ್ದಕ್ಕೆ ಆತನ ಕುಟುಂಬಕ್ಕೆ 60 ರೂ. ದಂಡ ವಿಧಿಸಲಾಗಿತ್ತು.

Advertisements

ಆ ಘಟನೆ ಬಳಿಕ ಎಲ್ಲ ಸಮುದಾಯದವರಿಗೆ ದೇವಾಲಯಗಳಲ್ಲಿ ಮುಕ್ತ ಅವಕಾಶ ನೀಡಬೇಕೆಂಬ ಕೂಗು ಹೆಚ್ಚಾಗಿತ್ತು.  ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರ ಧಾರ್ಮಿಕ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಕೆಲಸ ಕೋಲಾರ ಜಿಲ್ಲೆಯಲ್ಲಿ ಆರಂಭವಾಗಿದೆ.

ದೇಗುಲ

ಈ ಹಿಂದೆ, 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಉಪನ್ಯಾಸಕ ಡಾ. ಶಿವಪ್ಪ ಅರಿವು ಅವರ ತಂಡ ಮುಖ್ಯಮಂತ್ರಿಗೆ ಪತ್ರ ಬರೆದು ಎಲ್ಲ ದೇಗುಲಗಳಲ್ಲಿ ‘ಎಲ್ಲರಿಗೂ ಮುಕ್ತ ಪ್ರವೇಶ’ವೆಂಬ ಫಲಕ ಹಾಕಬೇಕೆಂದು ಒತ್ತಾಯಿಸಿತ್ತು. ಅಲ್ಲದೆ, ಮುಳಬಾಗಿಲು ತಾಲೂಕಿನ ಕಾಡೇನಹಳ್ಳಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌ ನಾಗಮೋಹನದಾಸ್‌ ಮತ್ತು ಕೋಲಾರ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸೋಮೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X