ಕೋಲಾರ : ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರಿಗೆ ಸನ್ಮಾನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕಿತ್ತು, ನೀಡಿದೆ ಇರುವುದು ನಮಗೆಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬೇಸರವಾಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯು ಅಭಿವೃದ್ಧಿ ಯಾಗುತ್ತಿದ್ದು ಇನ್ನೂ ಹೆಚ್ಚು ಅಭಿವೃದ್ಧಿ ಮಾಡಲು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜನಪ್ರಿಯ ಸಚಿವರಾದ ಬಿ.ಜೆಡ್ ಜಮೀರ್ ಅಹಮದ್ ಖಾನ್ ರವರನ್ನು ನೇಮಕ ಮಾಡಬೇಕು.
ಇದನ್ನು ಓದಿದ್ದೀರಾ..? ಬಾಗೇಪಲ್ಲಿ |ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸಂಪೂರ್ಣ ಬಂದ್ಗೆ ಅಭಿಮಾನಿಗಳು ಕರೆ
ಸದಾ ಬಡವರ ಪರ ಹಾಗೂ ಅಭಿವೃದ್ಧಿ ಪರ ಕಾಳಜಿ ವಹಿಸಿಕೊಂಡಿರುವ ಜಮೀರ್ ಅಹಮದ್ ಖಾನ್ ಕೋಲಾರ ಉಸ್ತುವಾರಿ ಸಚಿವರಾದರೆ ಜಿಲ್ಲೆ ಇನ್ನಷ್ಟು ಅಭಿವೃದ್ಧಿ ಯಾಗುತ್ತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೂ ಹೊಸ ಹುಮ್ಮಸ್ಸು ತರಲಿದೆ ಎಂದು ಈ ದಿನ.ಕಾಮ್ ಗೆ ತಿಳಿಸಿದರು.




