ಕೋಲಾರ | ‘ಕೇಂದ್ರದ ಅನುದಾನ ಅಕ್ಕಿ’; ಪಡಿತರ ವಿತರಣೆ ವೇಳೆ ಮುದ್ರಿತ​ ಬಿಲ್​ ವ್ಯವಸ್ಥೆ ಜಾರಿ

Date:

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ ಮುದ್ರಿತ ಬಿಲ್​ ವ್ಯವಸ್ಥೆ ಜಾರಿ ಮಾಡಿದೆ. ಬಿಲ್​​ನಲ್ಲಿ ವಿತರಣೆ ಮಾಡುವ ಅಕ್ಕಿಯ ವಿವರದ ಜೊತೆಗೆ ಜನರಿಗೆ ನೀಡುವ ಪಡಿತರ ಅಕ್ಕಿ ಕೇಂದ್ರ ಸರ್ಕಾರದ ಅನುದಾನ ಎಂದು ಮುದ್ರಣ ಮಾಡಲಾಗುತ್ತಿದೆ.

ಸದ್ಯ ಕೋಲಾರ ಸೇರಿದಂತೆ ರಾಜ್ಯಾದ್ಯಂತ ಮುಂದಿನ ತಿಂಗಳಿನಿಂದ ಅಧಿಕೃತವಾಗಿ ಬಿಲ್​ ವ್ಯವಸ್ಥೆ ಜಾರಿ ಮಾಡಲಿದೆ. ಈ ಮೊದಲು ಪಡಿತರ ವಿತರಣೆ ವೇಳೆಯಲ್ಲಿ ಕೈನಲ್ಲಿ ಬರೆದಿದ್ದ ಬಿಲ್ ವಿತರಣೆ ಮಾಡಲಾಗುತ್ತಿತ್ತು. ಹೊಸ ಬಿಲ್​ ವ್ಯವಸ್ಥೆಯಿಂದಾಗಿ ಅಕ್ಕಿ ವಿತರಣೆಯ ಅಕ್ರಮಕ್ಕೂ ಕೂಡ ಕಡಿವಾಣ ಬೀಳಲಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಉಚಿತವಾಗಿ ಹತ್ತು ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಜಾರಿ ತರೋದಾಗಿ ಹೇಳಿತ್ತು. ಕಾಂಗ್ರೆಸ್​ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈ ಅನ್ನಭಾಗ್ಯ ಯೋಜನೆ ಕೂಡಾ ಒಂದಾಗಿತ್ತು. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಪಡಿತರ ವಿತರಣೆಯಲ್ಲಿ ಹೊಸ ಬಿಲ್​ ಪದ್ದತಿಯನ್ನು ಜಾರಿಗೆ ತರುವ ಮೂಲಕ ಜನರಿಗೆ ಯಾವ ಸರ್ಕಾರ ಎಷ್ಟು ಅಕ್ಕಿ ಕೊಡ್ತಿದೆ. ಅಕ್ಕಿಯಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಅನ್ನೊ ಯೋಜನೆ ಅನುದಾನ ಎಷ್ಟು? ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅನುದಾನ ಎಷ್ಟು? ಅನ್ನೋದನ್ನು ಹೊಸ ಬಿಲ್​ನಲ್ಲಿ ವಿವರವಾಗಿ ಮುದ್ರಿಸುತ್ತದೆ.

ಜೊತೆಗೆ, ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಕೆಜಿ ಅಕ್ಕಿ, ಎಷ್ಟು ಕೆಜಿ ರಾಗಿ ಅಥವಾ ಜೋಳ ವಿತರಣೆಯಾಗಿದೆ ಅದಕ್ಕೆ ತಗುಲುವ ಮೊತ್ತವೆಷ್ಟು? ಆ ಅನುದಾನ ಎಲ್ಲಿಂದ ಬಂದಿದೆ? ರಾಜ್ಯ ಸರ್ಕಾರದ ಅನುಧಾನ ಎಷ್ಟು? ಅದು ಯಾವ ರೀತಿ ಗ್ರಾಹಕರಿಗೆ ತಲುಪಿದೆ ಅನ್ನೋ ಪ್ರತಿಯೊಂದು ಮಾಹಿತಿಯನ್ನು ಸದ್ಯ ಹೊಸ ಬಿಲ್​ನಲ್ಲಿ ದಾಖಲಾಗುವಂತೆ ಮಾಡಿದೆ.  ಪಡಿತರ ಅಕ್ಕಿಯಲ್ಲಾಗುತ್ತಿದ್ದ ಸೋರಿಕೆ ಹಾಗೂ ಅವ್ಯವಹಾರವನ್ನು ತಡೆಯಲು ಈ ವ್ಯವಸ್ಥೆ ಅನುಕೂಲವಾಗಲಿದೆ.

ಸದ್ಯ ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಜನರಿಗೆ ವಿತರಣೆ ಮಾಡುತ್ತಿರುವ ಅಕ್ಕಿ ಮತ್ತು ರಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆಯದ್ದು ಅನ್ನೋದನ್ನು ವಿವರವಾಗಿ ಮುದ್ರಿಸಿ ನೀಡುತ್ತಿದೆ. ಹಾಗಾಗಿ ಲೋಕಸಭಾ ಚುನಾವಣೆ ವೇಳೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರದ ಪಾಲೂ ಇದೆ ಎಂದು ಜನರಿಗೆ ಅರ್ಥಮಾಡಿಸುವುದು ಕೇಂದ್ರ ಸರ್ಕಾರದ ಈ ಹೊಸ ಪ್ರಿಂಟೆಡ್​ ಬಿಲ್​ನ ಉದ್ದೇಶ. ಸದ್ಯ ಈ ವ್ಯವಸ್ಥೆಗೆ ಗ್ರಾಹಕರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು ಇದು ಅಕ್ಕಿ ವಿತರಣೆಯ ಸೋರಿಕೆಯನ್ನು ತಡೆಯಲಿದೆ ಅನ್ನೋದು ಗ್ರಾಹಕರ ಮಾತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಯ್ಯಪ್ಪ ಹುಟ್ಟಿನ ಬಗ್ಗೆ ಅವಹೇಳನ; ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು...

ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ...

ಉತ್ತರ ಕನ್ನಡ | ಅವೈಜ್ಞಾನಿಕ ಮೀನುಗಾರಿಕೆ; ಸಮುದ್ರದಲ್ಲಿ ಮೀನು ಕ್ಷಾಮ

ಬರ ಕೇವಲ ರೈತರನ್ನು ಕಾಡುತ್ತಿಲ್ಲ, ಸಮುದ್ರ ಮೀನುಗಾರಿಕೆಗೂ ಈ ಬಾರಿ ಬರ...