ಕೋಲಾರ | ಸವರ್ಣೀಯ ಮಹಿಳೆಯಿಂದ ಹಲ್ಲೆ; ದಲಿತ ಯುವಕ ಆತ್ಮಹತ್ಯೆ

Date:

Advertisements

ಸವರ್ಣೀಯ ಮಹಿಳೆಯೊಬ್ಬರು ಪೊರಕೆಯಿಂದ ಹಲ್ಲೆ ನಡೆಸಿದರೆಂಬ ಕಾರಣಕ್ಕೆ ಮನನೊಂದ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಉಳಗೆರೆ ಗ್ರಾಮದಲ್ಲಿ ನಡೆದಿದ್ದು, ನಾಲ್ವರ ವಿರುದ್ಧ ಆತ್ಮಹತ್ಯೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ದಲಿತ ಯುವಕ ಶ್ರೀನಿವಾಸ್ (32) ಮತ್ತು ಮೇಲ್ಜಾತಿಗೆ ಸೇರಿದ ಅಶೋಕ್ (32) ಇಬ್ಬರೂ ಸ್ನೇಹಿತರಾಗಿದ್ದು, ದಿನಗೂಲಿ ಕಾರ್ಮಿಕರಾಗಿದ್ದರು.

“ಶ್ರೀನಿವಾಸ್ ಎಂಬಾತ ಅಶೋಕ್ ಹೆಂಡತಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಅಶೋಕ್‌ ವಿರುದ್ಧ ಗದರಿದ್ದರು. ಇದರಿಂದ ಅಶೋಕ್ ತನ್ನ ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಇದರಿಂದ ಕೋಪಗೊಂಡ ಮಂಜುಳಾ ತನ್ನ ಪತಿಯನ್ನು ಕರೆದುಕೊಂಡು ಶ್ರೀನಿವಾಸ್ ಮನೆ ಬಳಿ ಹೋಗಿ ನಿನ್ನಿಂದಲೇ ತಮ್ಮ ಕುಟುಂಬದಲ್ಲಿ ಸಮಸ್ಯೆ ಸೃಷ್ಟಿಯಾಗುತ್ತಿದೆ. ಇದಕ್ಕೆ ನೀನೆ ಕಾರಣವೆಂದು ಪೊರಕೆಯಿಂದ ಹಲ್ಲೆ ನಡೆಸಿದ್ದು, ಜಗಳ ಮಾಡಿ ಬಂದಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಬಾಲಕ; ಪ್ರಕರಣ ಮುಚ್ಚಿಹಾಕುವ ಹುನ್ನಾರ?

“ಘಟನೆಯ ನಂತರ ಅವಮಾನ ಸಹಿಸಲಾಗದೆ ಮನನೊಂದ ಶ್ರೀನಿವಾಸ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಗಳ ಸಮುದಾಯದ ಅಶೋಕ್‌ ಹಾಗೂ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿರುವುದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಸಿ ರವಿ

ಕೋಲಾರ ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು...

ಕೋಲಾರ ಜಿಲ್ಲೆಯ ಕೈ ಶಾಸಕರ ಜತೆ ವಿಧಾನಸೌಧದಲ್ಲಿ ಸಿಎಂ ಸಿದ್ದು ಚರ್ಚೆ

ವಿಧಾನಸೌಧದಲ್ಲಿ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರು ಆಡಳಿತ ಪಕ್ಷದ ಶಾಸಕರುಗಳ ಜತೆ...

ಕೋಲಾರ | ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ...

Download Eedina App Android / iOS

X