ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಮೊಹಮ್ಮದ್ ಜೈದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೆಹಸೀನ್ ಪಾಷ ಅವರನ್ನು ಜಿಲ್ಲಾ ಅಧ್ಯಕ್ಷ ನೀಹಾಲ್ ತರೀನ್ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಅದೇಶದ ಮೇರಿಗೆ ಆಯ್ಕೆ ಮಾಡಿದ್ದಾರೆ.
ಇದನ್ನು ಓದಿದ್ದೀರಾ..?ಕೆಜಿಎಫ್ ನಲ್ಲಿ ರಾಜಕೀಯ ಜಟಾಪಟಿ: ಶಾಸಕಿ ವಿರುದ್ಧ ಮಾಜಿ ಶಾಸಕ ಸಂಪಂಗಿ ಬೃಹತ್ ಧರಣಿ
ನೂತನ ಪದಾಧಿಕಾರಿಗಳು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಿರುವ ಯೋಜನೆಗಳು ಮತ್ತು ಕಾನೂನುಗಳ ಕುರಿತು ಜಾಗೃತಿ ಮೂಡಿಸಿ ಮುಂಬರುವ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಎನ್ಎಸ್ಯುಐ ಭಾಗವಹಿಸುವ ಜೊತೆಗೆ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಿ ವಿದ್ಯಾರ್ಥಿಗಳ ವಿಶ್ವಾಸ ಗಳಿಸಲು ಕಾರ್ಯನಿರ್ವಹಿಸುವುದಾಗಿ ತಿಳಿಸಿ ಆಯ್ಕೆಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.




