ಕೋಲಾರ | ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂದೇಶ್ ಬರದಂತೆ ನಿರ್ಬಂಧ: ದಲಿತ ಮುಖಂಡರ ಆಕ್ರೋಶ

Date:

ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಒಂದು ತಿಂಗಳು ಕಾಲ ಬರದಂತೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ಮಾಡಿರುವ ಆದೇಶವನ್ನು ಕೂಡಲೇ ಹಿಂಪಡೆದು, ತಾಲೂಕಿನ ಭಾಗೇಪಲ್ಲಿಯಲ್ಲಿ ಹೋರಾಟ ಮಾಡಲು ಅನುವು ಮಾಡಿಕೊಡಬೇಕು ಎಂದು ಹಿರಿಯದಲಿತ ಮುಖಂಡ ದಲಿತ್ ನಾರಾಯಣಸ್ವಾಮಿ ಒತ್ತಾಯಿಸಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಗೇಪಲ್ಲಿ ತಾಲೂಕಿನ ಶಾಸಕ ಸುಬ್ಬಾರೆಡ್ಡಿಯ ವಿರುದ್ಧ ಸಂದೇಶ್ ಭೂ ಮಾಫಿಯಾ ಆರೋಪ ಮಾಡಿ ಹೋರಾಟ ನಡೆಸುತ್ತಿರುವುದನ್ನು ಅಲ್ಲಿನ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಒಂದು ತಿಂಗಳು ಕಾಲ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಏರಿದ್ದಾರೆ ಇದು ಮಾನವ ಹಕ್ಕಿಗೆ ಮಾಡಿರುವ ದ್ರೋಹವೆಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಂದೇಶ್ ಹುಟ್ಟು ಹೋರಾಟಗಾರ, ಸಾವಿರಾರು ಎಕರೆಯಷ್ಟು ಸರ್ಕಾರ ಜಾಗಗಳನ್ನು ಭೂಗಳ್ಳರಿಂದ ಉಳಿಸಿ ಸರ್ಕಾರಕ್ಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಭೂ ಮಾಫಿಯಾ ವಿರುದ್ಧ ನಿರಂತರ ಹೋರಾಟಗಳನ್ನು ಮಾಡಿಕೊಂಡು ಬಡವರಿಗೆ ಶೋಷಿತರಿಗೆ ಧ್ವನಿಯಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಸಂದೇಶ್ ಅವರ ಪ್ರತಿಯೊಂದು ಹೋರಾಟಕ್ಕೂ ದಲಿತ ಸಂಘಟನೆಗಳು ಬೆಂಬಲ ನೀಡುತ್ತಿದೆ ಎಂದರು.

ಶಾಸಕ ಸುಬ್ಬಾರೆಡ್ಡಿ ಮಾಡಿರುವ ಭೂ ಕಬಳಿಕೆ ವಿರುದ್ಧ ಸಂದೇಶ್ ಹೋರಾಟ ಮಾಡುತ್ತಿದ್ದಾರೆ. ಇದನ್ನು ಸಹಿಸದ ಶಾಸಕರು ಸರ್ಕಾರ ಮಟ್ಟದಲ್ಲಿ ಒತ್ತಡ ತಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಮಾಡುವಂತೆ ಆದೇಶ ತಂದಿದ್ದಾರೆ. ನಿಜವಾಗಿ ಶಾಸಕರು ತಮ್ಮ ಆತ್ಮ ಶುದ್ಧಿ ಇದ್ದರೆ, ಭೂ ಕಬಳಿಕೆ ಮಾಡದಿದ್ದರೆ ಸಂದೇಶ್ ಅವರ ಮೇಲೆ ನಿರ್ಬಂಧ ಆದೇಶ ಹೊರಡಿಸಿರುವುದು ಎಷ್ಟು ಮಟ್ಟಿಗೆ ಸರಿ. ಈ ಘಟನೆ ಕಂಡರೆ ಭೂಕಬಳಿಕೆ ಮಾಡಿರುವುದು ಸತ್ಯವೆಂದು ಸಾರ್ವಜನಿಕರಿಗೆ ಗೊತ್ತಾಗಿದೆ ಎಂದು ಆರೋಪಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ನಿರ್ಬಂಧದ ಆದೇಶ ಹಿಂಪಡೆದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆಎಂ ಸಂದೇಶ್ ಅವರು ಹೋರಾಟ ಮಾಡಲು ಅನುವು ಮಾಡಿಕೊಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಯಾರು ಭೂಕಬಳಿಕೆ ಮಾಡಿದ್ದಾರೋ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಕೆಜಿಎಫ್ ನಲ್ಲಿ ರಾಜಕೀಯ ಜಟಾಪಟಿ: ಶಾಸಕಿ ವಿರುದ್ಧ ಮಾಜಿ ಶಾಸಕ ಸಂಪಂಗಿ ಬೃಹತ್ ಧರಣಿ

ಈ ಸಂದರ್ಭದಲ್ಲಿ ಮುತ್ತಿಕುಂಟೆ ಕೃಷ್ಣ, ಲಾಯರ್ ಅಂಬರೀಷ್, ಚದುಮನಹಳ್ಳಿ ಶ್ರೀರಾಮ, ಅಂಬೇಡ್ಕರ್ ನಗರ ಗಿರಿಜಮ್ಮ, ಗಾಂಧಿನಗರ ಲಕ್ಷ್ಮಣ, ಅರಳಿಕುಂಟೆ ರಾಜು, ಮೆಕಾನಿಕ್ ನಾರಾಯಣಸ್ವಾಮಿ, ಬಂಗಾರಪೇಟೆ ಅನೀಲ್ ಕುಮಾರ್ ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...