ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಎಂ.ಆರ್. ರವಿ ಕುಮಾರ್ ಅವರಿಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಿ ಜಿಲ್ಲೆಯ ಅಭಿವೃದ್ಧಿಗೆ ಸ್ವಾಗತ ಕೋರಿದರು.
ಜಿಲ್ಲೆಯವರೇ ಆಗಿರುವ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ರೈತರು, ದಲಿತರು, ಕಾರ್ಮಿಕರು ಹಾಗೂ ಎಲ್ಲಾ ವರ್ಗಗಳ ಏಳಿಗೆಗಾಗಿ ಕಾರ್ಯನಿರ್ವಹಿಸಿ ಕೋಲಾರವನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿ ರೂಪಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ದಲಿತ ಸಂಘಟನೆಗಳಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿ ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ತಿಳಿಸಿದರು.
ಈ ವೇಳೆ ನಚಿಕೇತನ ನಿಲಯದ ಕಲ್ಲಿನ ಕಾಂಪೌಂಡ್ನ ಮಧ್ಯಭಾಗದಲ್ಲಿ ಗಾಜಿನ ಕವಚದಲ್ಲಿ ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗಳನ್ನು ಅಳವಡಿಸಬೇಕು, ಹಾಗೂ ಹಾಸ್ಟೆಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಬಂಗಾರಪೇಟೆ ನಗರದಲ್ಲಿ ನಿರ್ಮಿಸಿರುವ ಮಾದರಿಯಂತೆ ಮೇಲ್ಚಾವಣಿ ಅಳವಡಿಸಿ, ಹಾಳಾಗಿರುವ ಭಾಗಗಳನ್ನು ದುರಸ್ತಿ ಮಾಡಿಸಬೇಕು ಎಂದು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಸಂಘಟನೆಗಳೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಹಂತ ಹಂತವಾಗಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದನ್ನು ಓದಿದ್ದೀರಾ..?ಕೋಲಾರ | ಎಸ್ಐಆರ್ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಂಯುಕ್ತರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು, ಪದಾಧಿಕಾರಿಗಳಾದ ಖಾದ್ರಿಪುರ ಬಾಬು, ಮೇಡಿಹಾಳ ಮುನಿಅಂಜಿನಪ್ಪ, ಮಂಜುಳಮ್ಮ, ಗಾಂಧಿನಗರ ಯುವರಾಜ್, ರಾಮಚಂದ್ರ, ಗದ್ದೆಕಣ್ಣೂರು ಮುನಿಯಪ್ಪ, ಮೋಚಿಪಾಳ್ಯ ನಾಗೇಶ್, ಹರಳಕುಂಟೆ ರಾಜು, ಗಂಗಮ್ಮನಪಾಳ್ಯ ಶಿವಣ್ಣ, ಶ್ರೀರಾಮಪುರ ರವಿ, ಖಾದ್ರಿಪುರ ಚಲಪತಿ, ಹುತ್ತೂರು ರವಿ, ಜಗದೀಶ್, ನವೀನ್, ಸೇರಿದಂತೆ ಮುಂತಾದ ದಲಿತ ಸಂಘಟನೆಗಳ ಮುಖಂಡರು ಇದ್ದರು,




