ಮಾಲೂರು | ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಗುರಿ : ಹೂಡಿ ವಿಜಿಕುಮಾರ್

Date:

ಜೆಡಿಎಸ್ ಮುಖಂಡ ಹೂಡಿ ವಿಜಿಕುಮಾರ್ ಅವರ ನೇತೃತ್ವದಲ್ಲಿ ಮಾಲೂರು ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಯೋಜನೆಗೆ ಮಾಲೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಹೂಡಿ ವಿಜಿಕುಮಾರ್, ತಾಲೂಕಿನ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರು ವಿವಿಧ ದಾನಿಗಳ ಸಹಕಾರ ಪಡೆದು ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು ಹಿಂದಿನ ವರ್ಷ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಿಟ್‌ಗಳನ್ನು ವಿತರಿಸಲಾಗಿತ್ತು. ಈ ಬಾರಿ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಗುತ್ತಿದೆ. ಕಳೆದ ವರ್ಷ ತಾಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.42 ಇದ್ದರೆ, ಈ ಬಾರಿ ಶೇ.77ಕ್ಕೆ ಏರಿಕೆಯಾಗಿದೆ. ಈ ಸಾಧನೆಗೆ ಕಾರಣರಾದ ಶಿಕ್ಷಕರು, ಪ್ರಾಂಶುಪಾಲರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸರ್ಕಾರದ ಅನುದಾನ ಎಲ್ಲ ಅಗತ್ಯಗಳಿಗೆ ಸಾಕಾಗದ ಹಿನ್ನೆಲೆಯಲ್ಲಿ ದಾನಿಗಳ ನೆರವಿನಿಂದ ಶಾಲೆಗಳಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಾಲೇಜು ಹಾಗೂ ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ತಿಳಿಸಿದರೆ ಅವುಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಕರೆ ನೀಡಿದರು.

ಜೆಡಿಎಸ್ ಮುಖಂಡ ಆರ್. ಪ್ರಭಾಕರ್ ಗೌಡ ಮಾತನಾಡಿ, ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡುತ್ತಿರುವುದು ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗಲಿದೆ. ಪೋಷಕರು ಕಷ್ಟಪಟ್ಟು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ, ತಮ್ಮ ಕುಟುಂಬ ಹಾಗೂ ತಾಲೂಕಿನ ಹೆಮ್ಮೆ ಹೆಚ್ಚಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲೆ ಚಂದ್ರಿಕಾ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಉದ್ದೇಶದಿಂದ ಬ್ಯಾಗ್‌ಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯದ ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ಆಶಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ರಾಮಕೃಷ್ಣಪ್ಪ, ಮುಖಂಡರಾದ ಮೈಲಾಂಡಹಳ್ಳಿ ನಾರಾಯಣಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...