ಕೊಲ್ಹಾರ | ಬಾಧಿತ ಗ್ರಾಮಗಳ ಬೇಡಿಕೆ ಈಡೇರಿಸುವಂತೆ ಕರವೇ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡುವುದು ಮತ್ತು ಬಾಧಿತವಾದ ಗ್ರಾಮಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರವೇ(ಪ್ರವೀಣಶೆಟ್ಟಿ ಬಣ)ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಕೂಡಗಿ ಎನ್‌ಟಿಪಿಸಿ ದ್ವಾರದ ಬಳಿ ತಹಶೀಲ್ದಾರ್ ಎಸ್ ಎಂ ಮ್ಯಾಗೇರಿ ಹಾಗೂ ಎನ್‌ಟಿಪಿಸಿ ಎಸ್ ಆರ್ ಕಾಲಿಯ ಮೂರ್ತಿ ಅವರಿಗೆ ಜಿಲ್ಲಾ ಅಧ್ಯಕ್ಷ ಬಸವರಾಜ ತಾಳಿಕೋಟಿ ಮತ್ತು ರವಿ ಗೊಳಸಂಗಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, “ಎನ್‌ಟಿಪಿಸಿ ಕೂಡಗಿಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ನೀಡಿ, ಈ ಭಾಗದ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕು. ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

Advertisements

ತಾಲೂಕು ಅಧ್ಯಕ್ಷ ರವಿ ಗೋಳಸಂಗಿ ಮಾತನಾಡಿ, “ಕೂಡಗಿ ಎನ್‌ಟಿಪಿಸಿಯಿಂದ ಬಾಧಿತ ಗ್ರಾಮಗಳಾದ ಕೂಡಗಿ, ಮಸೂತಿ, ತೆಲಗಿ, ಗೋಳಸಂಗಿ ಹಾಗೂ ಮುತ್ತಗಿ ಈ ಎಲ್ಲ ಗ್ರಾಮಗಳಿಂದ ಭೂಮಿಯನ್ನು ಪಡೆದುಕೊಂಡಿದ್ದು, ಸದರಿ ಜಮೀನು ಪಡೆಯುವಾಗ ಮಾಡಿಕೊಂಡ ಒಪ್ಪಂದ ಪ್ರಕಾರ ಸಂತ್ರಸ್ತರಿಗಾಗಿ ಹಲವು ಅವಕಾಶಗಳನ್ನು ಮುಂದಿಟ್ಟಿದ್ದು, ಅದರಲ್ಲಿ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ನ್ಯಾಯ ಒದಗಿಸಿಕೊಡಲು ಈ ಹೋರಾಟ ಅನಿವಾರ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರಾಜ್ಯ ಸರ್ಕಾರ ಆ.19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು: ಸಂಸದ ಗೋವಿಂದ ಕಾರಜೋಳ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಶ್ರೀಕಾಂತ ರಾಠೋಡ, ನಿಡಗುಂದಿ ತಾಲೂಕು ಅಧ್ಯಕ್ಷ ಆನಂದ ಹಡಗಲಿ, ಉಪಾಧ್ಯಕ್ಷರಾದ ರಾಜೂಗೌಡ ಬಿರಾದಾರ, ಭೀಮನಗೌಡ ಬಿರಾದಾರ ಹಾಗೂ ಮುತ್ತು ಪೂಜಾರಿ, ಶ್ರೀಧರ ಬಳಿಗಾರ ಜಿಲ್ಲೆಯ ಕರೆವೇ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X