ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಪ್ರತಿದಿನ ದೇಶದಲ್ಲಿ ಸಾವಿರಾರು ಮಂದಿ ತಮ್ಮ ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ ಎಂದು ಡಾ. ವಿವೇಕ ವಾಗುಲೆ ಆತಂಕ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಗರದ ಭಸವೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. “ಶ್ವಾಸಕೋಶದ ತೊಂದರೆ, ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ನಿತ್ಯ 250ಕ್ಕೂ ಅಧಿಕ ಮಂದಿ ಹೃದ್ರೋಗ ಸಂಬಂಧಿ ಖಾಯಿಲೆಗಳಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು ಸಾರ್ವಜನಿಕ ರುಪಾನ್ ಮಸಲಾ, ಗುಟ್ಕಗಳಂತ ತಂಬಾಕುಗಳಿಂದ ದೂರ ಇರಬೇಕು” ಎಂದು ಕರೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ₹1715.81 ಕೋಟಿ ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿವೆ ಇಲಾಖೆಗಳು
ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಗೀತಾ ಓಲೆಕಾರ ಪ್ರಾಸ್ತಾವಿಕವಾಗಿ ಮಾತನಾಡಿ, “ಗ್ರಾಮಾಭಿವೃದ್ದಿ ಯೋಜನೆ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನ ಅನುಷ್ಠಾನಗೊಳಿಸಿ ದುಶ್ಚಟಗಳ ಕುರಿತು ಜಾಗೃತಿ ಮೂಡಿಸುತಿದ್ದಾರೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷೆ ಗೌರಮ್ಮ ಬಡಿಗೇರ, ವಲಯ ಮೇಲ್ವಿಚಾರಕಿ ತ್ರಿವೇಣಿ ಭಾವಿಕಟ್ಟಿ, ಸೇವಾಪ್ರತಿನಿಧಿಗಳಾದ ಶಿವಲೀಲಾ ಅಂಗಡಿ, ವಿಜಯಲಕ್ಷ್ಮಿ ಅಂಗಡಿ, ಲಕ್ಷ್ಮೀ ಕುಂಬಾರ ಸೇರಿದಂತೆ ಕೇಂದ್ರದ ಸದಸ್ಯರು ಇದ್ದರು.