ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕರೆದಿದ್ದ ಶಾಂತಿ ಸಭೆಯಲ್ಲೇ ಎರಡು ರಾಜಕೀಯ ಬಣಗಳು ಅಶಾಂತಿ ಸೃಷ್ಟಿಸಿ, ವಾಗ್ವಾದ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಗಂಗಾವತಿ ಪಟ್ಟಣದಲ್ಲಿರುವ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಇಂದು(ಜೂ.14) ಗಂಗಾವತಿ ಪೊಲೀಸರು ಬಕ್ರೀದ್ ಹಬ್ಬದ ಆಂಗವಾಗಿ ಪೂರ್ವಭಾವಿ ಶಾಂತಿ ಸಭೆ ಕರೆದಿದ್ದರು. ಆದರೆ, ಪೂರ್ವಭಾವಿ ಶಾಂತಿ ಸಭೆ ಎರಡು ಬಣಗಳ ತಿಕ್ಕಾಟಕ್ಕೆ ಸಾಕ್ಷಿಯಾಯಿತು.

ಸಭೆಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬೆಂಬಲಿಗರ ನಡುವೆ ಪೊಲೀಸರ ಮುಂದೆಯೇ ವಾಗ್ವಾದ ನಡೆಯಿತು.

Advertisements

ಸಭೆ ಆರಂಭವಾದ ಬಳಿಕ ಪೊಲೀಸ್ ಅಧಿಕಾರಿಗಳು ಬಕ್ರೀದ್ ಆಚರಣೆ ಕುರಿತು ಸಲಹೆ, ಸೂಚನೆ ನೀಡಲು ಮುಸ್ಲಿಂ ಮುಖಂಡರಿಗೆ ಅವಕಾಶ ನೀಡಿದರು.

ಈ ವೇಳೆ ಶಾಸಕ ಜಿ.ಜನಾರ್ದನರೆಡ್ಡಿ ಅಪ್ತ ಅಲಿಖಾನ್ ಮಾತನಾಡಿ, “ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಸಂದೇಶದ ಕುರಿತು ಮಾತನಾಡದೇ ಪಕ್ಷ ಹಾಗೂ ರಾಜಕಾರಣಿಗಳ ವಿರುದ್ಧ ಮಾತನಾಡಿ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಾರೆ. ಪ್ರಾರ್ಥನಾ ಸಮಯಕ್ಕೆ ಬರುವುದಿಲ್ಲ. ಯಾವಾಗಲೋ ಬರುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು” ಎಂದು ಸಭೆಯಲ್ಲೇ ಹೇಳಿದರು.

ಈ ವೇಳೆ ಅನ್ಸಾರಿ ಅವರ ಬೆಂಬಲಿಗ ಎಸ್.ಬಿ ಖಾದ್ರಿ ಮತ್ತು ಸಂಗಡಿಗರು ಅಲಿಖಾನ್ ಅವರಿಗೆ, “ನೀವು ಗಂಗಾವತಿಯವರಲ್ಲ. ಇಲ್ಲಿ ನಿಮ್ಮದೇನು ಕೆಲಸ. ಏಕೆ ಮಾತನಾಡುತ್ತೀರಿ?” ಎಂದು ವಾಗ್ವಾದ ನಡೆಸಿ ಸಭೆ ಬಹಿಷ್ಕಾರಕ್ಕೆ ಮುಂದಾದರು.

ಪೊಲೀಸರ ಮಧ್ಯ ಪ್ರವೇಶ: ಖಡಕ್ ಎಚ್ಚರಿಕೆ

ಈ ವೇಳೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ಹೋಗುವುದನ್ನು ಕಂಡ ಪೊಲೀಸರು, ಎಲ್ಲರನ್ನೂ ಸುಮ್ಮನಿರುವಂತೆ ಸೂಚಿಸಿದರು.

ಬಳಿ ಮಾತನಾಡಿದ ಎಎಸ್‌ಪಿ ಹೇಮಂತ್‌ ಕುಮಾರ್, “ಬಕ್ರೀದ್ ಆಚರಣೆಗೆ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ಹಬ್ಬ ಆಚರಣೆ ಮಾಡಬೇಕು. ಗೋಹತ್ಯೆ ಸಂಪೂರ್ಣ ನಿಷೇಧಿಸಲಾಗಿದೆ. ಪ್ರಾಣಿವಧೆ ಅಗತ್ಯವಿದ್ದಲ್ಲಿ ಪಶುಪಾಲನಾ ಇಲಾಖೆಯಿಂದ ಪರವಾನಗಿ ಪಡೆದು ಪಶುವೈದ್ಯರ ನೇತೃತ್ವದಲ್ಲಿ ವಧಾಗಾರದಲ್ಲಿ ವಧೆ ಮಾಡಬೇಕು” ಎಂದರು.

ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಪೊಲೀಸ್ ಪಾಟೀಲ್ ಮಾತನಾಡಿ, “ಶಾಂತಿಯುತವಾಗಿ ಹಬ್ಬ ಆಚರಿಸುತ್ತೇವೆ ಎಂದು ನೀವೇ ಅಶಾಂತಿ ಮಾಡಲು ಹೊರಟಿದ್ದೀರಾ. ಹೀಗಾದರೆ ಗಂಗಾವತಿ ಶಾಂತಿಯಿಂದ ಇರುವುದಾದರೂ ಹೇಗೆ?. ಹಬ್ಬವನ್ನ ಹಬ್ಬದ ರೀತಿಯಲ್ಲಿ ಆಚರಿಸಬೇಕು. ಅದಕ್ಕೆ ಬೇಕಾದ ಬಂದೋಬಸ್ತ್ ಅನ್ನು ಇಲಾಖೆ ಒದಗಿಸುತ್ತದೆ. ಕಾನೂನು ಬಾಹಿರ ಕೃತ್ಯಗಳು ನಡೆದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ನಾವು ನೀಡುವ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಂತಿಗೆ ಭಂಗವನ್ನು ಯಾರು ತರಬಾರದು. ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ವೈಯಕ್ತಿಕ ಏನಿದ್ದರೂ ಇಲ್ಲಿ ಬೇಡ. ರಾಜಕೀಯ ಮಾಡುವುದಿದ್ದರೆ ಚುನಾವಣೆಗಳ ಸಂದರ್ಭದಲ್ಲಿ ಮಾಡಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಸಮುದಾಯವೊಂದರ ಧಾರ್ಮಿಕ ಹಬ್ಬ ಸರಿಯಾಗಿ ಆಗಲಿ ಅಂತ ಪೊಲೀಸರು ಕರ್ತವ್ಯ ಮಾಡುತ್ತಿದ್ದೇವೆ. ನೀವೆಲ್ಲರೂ ಸಹಕಾರ ಕೊಡಬೇಕು ಅಷ್ಟೇ” ಎಂದು ಖಡಕ್ ಆಗಿ ಎರಡೂ ಬಣದ ನಾಯಕರಿಗೆ ಎಚ್ಚರಿಕೆ ನೀಡಿದರು.

ನಗರ ಠಾಣೆ ಪಿಐ ಪ್ರಕಾಶ ಮಾಳೆ, ಗ್ರಾಮೀಣ ಠಾಣೆ ಪಿಐ ಸೋಮಶೇಖರ ಜುತ್ತಲ್, ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ, ತಾ.ಪಂ ಇಒ ಲಕ್ಷ್ಮೀದೇವಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X