ಕ್ಷೌರ ಮಾಡಲು ನಿರಾಕರಿಸಿದ ಮುದುಕಪ್ಪ ಹಡಪದ್ ಆಸ್ತಿ ಮುಟ್ಟುಗೋಲು ಹಾಕಬೇಕು : ಮಾದಿಗ ಸಮುದಾಯ ಒತ್ತಾಯ

Date:

Advertisements

ಕೊಪ್ಪಳ ಜಿಲ್ಲೆಯ ಸಂಗನ ಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ಕೊಲೆ ಮಾಡಿದ ಮುದುಕಪ್ಪ ಹಡಪದ್ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಗ್ರೇಡ್ 2 ವೆಂಕಟೇಶ್ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಗತಿಸಿದರು ಇನ್ನೂ ಕೂಡ ಅಸ್ಪೃಶ್ಯತೆ ಎಂಬುದು ನಿವಾರಣೆ ಆಗದೆ ಇನ್ನೂ ಜೀವಂತವಾಗಿದೆ, ಇನ್ನೂ ಕೂಡ ಕೆಲ ಜಿಲ್ಲೆಗಳಲ್ಲಿ ಅಸ್ಪೃಶ್ಯರಿಗೆ ಇದುವರೆಗೂ ಗುಡಿ -ಗುಂಡಾರಗಳಲ್ಲಿ , ಚಹಾ ಹೋಟೆಲ್ಗಳಲ್ಲಿ, ಮತ್ತು ಅತಿ ಹೆಚ್ಚು ದಲಿತ ಅತ್ಯಾಚಾರ ಕೊಲೆ ಸುಲಿಗೆಯ ಘಟನೆಗಳು ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು .

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನ ಹಾಲ ಗ್ರಾಮದಲ್ಲಿ ಸೆಲ್ಯೂನ್ ಅಂಗಡಿಗೆ ತೆರಳಿದ ದಲಿತ ಯುವಕನಿಗೆ ನೀನು ಕೆಳ ಜಾತಿಯವನು ನಾನು ಮಾಡುವುದಿಲ್ಲ ಜಾತಿ ನಿಂದನೆ ಮಾಡಿ, ನಂತರ ಕೊಲೆ ಮಾಡಿದ್ದಾನೆ . ತೀವ್ರ ಕಡು ಬಡತನದಿಂದ ನರಳುತ್ತಿದ್ದ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು . ಕೊಲೆ ಮಾಡಿದ ಆರೋಪಿಯ ಆಸ್ತಿ ಸರ್ಕಾರ ಮುಟ್ಟುಗೊಲು ಹಾಕಬೇಕು, ನೊಂದ ಕುಟುಂಬಕ್ಕೆ ಪೊಲೀಸ್ ಬಂದೋಬಸ್ತ್ ನೀಡಬೇಕು ಎಂದು ಒತ್ತಾಯಿಸಿದರು .

Advertisements

ಜಿಲ್ಲೆಯ ಎಲ್ಲಾ ದಲಿತ ಕಾಲೋನಿಗಳಿಗೆ ಪೊಲೀಸ್ ರಕ್ಷಣೆ ನೀಡಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು , ಜಾಗೃತ ಮೂಡಿಸಬೇಕು ಎಂದು ಮನವಿ ಮಾಡಿದರು.

.ಈ ಸಂದರ್ಭದಲ್ಲಿ ಎಮ್ ಆರ್ ಎಚ್ ಎಸ್ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪುರ, ಗೌರವ ಸಲಹೆಗಾರ ಬಸವರಾಜ (ಜಯಂ) ಮಸರಕಲ್, ಬುರಪ್ಪ ಮರೆಡ್ಡಿ, ವಿಜಯಕುಮಾರ್ ಬಲ್ಲಿದವ್, ಸೇರಿದಂತೆ ಇತರರು ಇದ್ದರು

ವರದಿ :ಶಿವರಾಮ ಕಟ್ಟಿಮನಿ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X