ಕೊಪ್ಪಳ | ಒಳಮೀಸಲಾತಿ ಜಾರಿ ವಿಚಾರ; ತಲೆ ಬೋಳಿಸಿಕೊಂಡು ವಿನೂತನ ಪ್ರತಿಭಟನೆ

Date:

Advertisements

ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ಪಾಲಿಸದ ಸರ್ಕಾರ ದಲಿತರ ಪಾಲಿಗೆ ಸ‌ತ್ತಿದೆ ಎಂದು‌ ಆಕ್ರೋಶ ವ್ಯಕ್ತಪಡಿಸಿದ ಮಾದಿಗ ದಂಡೋರ ಸಮಾಜ ರಾಜ್ಯಾಧ್ಯಕ್ಷ ಹುಸೇನ್‌ಸ್ವಾಮಿ ಡಿ ತಲೆಬೋಳಿಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ವಿಶಿಷ್ಟವಾಗಿ ಪ್ರತಿಭಟಿಸಿದರು.

ಮಾದಿಗ ದಂಡೋರ ಸಂಸ್ಥಾಪಕ ಬಿ ಹುಸೇನ್‌ಸ್ವಾಮಿ ಮಾತನಾಡಿ, “ಸದಾಶಿವ ಆಯೋಗವನ್ನು ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ರಾಜ್ಯ ಸರ್ಕಾರ ದಿಕ್ಕರಿಸುತ್ತಿದೆ. ಒಳಮೀಸಲಾತಿಗಾಗಿ 30 ವರ್ಷಗಳಿಂದಲೂ ಹೋರಾಟ ಮಾಡುತ್ತಿ‌ದ್ದೇವೆ. ಚುನಾವಣೆಯ ನೆಪ ಹೇಳುತ್ತ ಒಳಮೀಸಲಾತಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿದೆ. ಹಾಗಾಗಿ 70 ವರ್ಷವಾದರೂ ಕಾಂಗ್ರೆಸ್ ಸರ್ಕಾರ ನಮ್ಮ ದಲಿತರ ಪರವಾಗಿಲ್ಲ. ದಲಿತರ ಹೆಸರೇಳಿಕೊಂಡು ಈ ಸರ್ಕಾರ ಬದುಕುತ್ತಿದೆಯೇ ಹೊರತು ಶೋಷಣೆಗೊಳಗಾದವರ ಪರ ಇಲ್ಲ ದಲಿತರ ಪಾಲಿಗೆ ಸರ್ಕಾರ ಸ‌ತ್ತಿದೆ. ಅದಕ್ಕಾಗಿ ತಲೆಬೋಳಿಸಿಕೊಂಡು ಸರ್ಕಾರಕ್ಕೆ ಮುಡಿಕೊಟ್ಟೆರುವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಒಳಮೀಸಲಾತಿ ಹೋರಾಟ 1

ಹೇಮರಾಜ ಬೀರಾಪುರ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಮಾದಿಗ ಸಮುದಾಯಕ್ಕೆ ಸತತವಾಗಿ ವಂಚನೆ ಮಾಡುತ್ತ ಬಂದಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶವಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯಧೋರಣೆ ತಾಳಿದೆ. ಈ ಕೂಡಲೇ ಸಿ‌ಎಂ ಸಿದ್ಧರಾಮಯ್ಯನವರು ಒಳಮೀಸಲಾತಿ ಜಾರಿಗೊಳಿಸಬೇಕು ಇಲ್ಲದಿದ್ದರೆ ಬೆಂಗಳೂರು ಸಂವಿಧಾನ ಚಲೋ ಮೂಲಕ ಫ್ರೀಡಂ ಪಾರ್ಕ್‌ನಲ್ಲಿ ತೀವ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

Advertisements
ಒಳಮೀಸಲಾತಿ ಕೊಪ್ಪಳ

ಮಾದಿಗ ದಂಡೋರ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶರಣಮ್ಮ ಮಾತನಾಡಿ, ” ಬಹಳ ವರ್ಷದ ಒಳಮೀಸಲಾತಿ ಬೇಡಿಕೆಯನ್ನು ಸರ್ಕಾರ ಈಡೇರಿಸಲೇಬೇಕು. ದೇವಸ್ಥಾನದಲ್ಲಿ ಬಿಟ್ಟುಕೊಳ್ಳದ ನಮಗೆ, ಕುಡಿಯುವುದಕ್ಕೆ ನೀರು ಎತ್ತರಿಸಿ ಹಾಕುವ ನಮ್ಮ ಸಮುದಾಯಕ್ಕೆ ಒಳಮೀಸಲಾತಿ ಅತ್ಯವಶ್ಯ. ತಳಸಮುದಾಯದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸದಾಶಿವ ಆಯೋಗ ಜಾರಿಯಾಗಬೇಕು ಹಾಗೂ ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು” ಎಂದು ಒತ್ತಾಯಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿʼ; ಕ್ರಾಂತಿಕಾರಿ ಪಾದಯಾತ್ರೆ

ಜಿಲ್ಲಾಧಿಕಾರಿಗಳು ಕಚೇರಿಯಲ್ಲಿಯೇ ಇದ್ದು ಮಾದಿಗ ದಂಡೋರದ ಬೇಡಿಕೆಯ ಮನವಿ ಪತ್ರ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿಯವರನ್ನು ಕಳುಹಿಸಿರುವುದಕ್ಕೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹುಸೇನ್‌ಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ, “ಜಿಲ್ಲಾಧಿಕಾರಿಗಳ ಕೋರ್ಟ್ ನಡೆದಿದೆ. ಹಾಗಾಗಿ ಅವರ ಪರವಾಗಿ ನನ್ನನ್ನು ಕಳಿಸಿದ್ದಾರೆ ನಿಮ್ಮ ಮನವಿಯನ್ನು ಮೇಲಾಧಿಕಾರಿಗಳಿಗೆ ತುಲುಪಿಸು ರಾಜ್ಯ ಸರ್ಕಾರಕ್ಕೆ ಹಾಗೂ ರಾಜ್ಯಪಾಲರಿಗೆ ತಲುಪಿಸು‌ತ್ತೇವೆ” ಎಂದು ಹೇಳಿದ ಬಳಿಕ ಮನವಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X