ಕೊಪ್ಪಳ | ಶಿಥಿಲಗೊಂಡ ಅಕ್ಷರ ದಾಸೋಹ ಕಟ್ಟಡ; ಸಾರ್ವಜನಿಕರ ಆಕ್ರೋಶ

Date:

Advertisements

ಕೊಪ್ಪಳ ನಗರ ಬೇಲ್ದಾರ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಬಿಸಿಯೂಟ ಕೇಂದ್ರ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. 3-4 ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಟ್ಟಡ ಸೋರುತ್ತಿದೆ. ಯಾವಾಗ ಕುಸಿಯುತ್ತದೋ ಎಂಬ ಅಪಾಯ ಇದ್ದರೂ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ದಾರಿ ಇಲ್ಲದೆ ಸೋರುತ್ತಿರುವ ಕಟ್ಟಡದಲ್ಲೇ ಸಿಬ್ಬಂದಿ ಅಡುಗೆ ಮಾಡಿದ್ದಾರೆ. ನೀರಿನಲ್ಲಿ ಪಾತ್ರೆ- ಪಗಡೆಗಳು ತೇಲಾಡುತ್ತಿರುವ ದೃಶ್ಯ ಕಂಡುಬಂದಿದ್ದು, ಪೋಷಕರು ಆತಂಕದಲ್ಲಿದ್ದಾರೆ.

WhatsApp Image 2025 07 21 at 7.22.22 PM

ಶಾಲಾ ಮುಖ್ಯೋಪಾಧ್ಯಾಯರು ಈ ಸಂಬಂಧ ಬಿಇಒ ಮತ್ತು ಅಕ್ಷರ ದಾಸೋಹ ಬಿಸಿಯೂಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಇದುವರೆಗೂ ಯಾರೂ ಕ್ರಮ ಕೈಗೊಂಡಿರುವುದಿಲ್ಲ. ಈ ಎಲ್ಲಾ ಸಮಸ್ಯಗಳಿಂದಾಗಿ ಬಿಸಿಯೂಟ ಸಿಬ್ಬಂದಿಗಳು ಭಯದ ವಾತಾವರಣದಲ್ಲಿ ಕೆಲಸವನ್ನು ಮಾಡಬೇಕಾಗಿದೆ.

Advertisements

ಸಾಮಾಜಿಕ ಹೋರಾಟಗಾರ ಬಸವರಾಜ್ ಶೀಲವಂತರ ಮಾತನಾಡಿ, “ಬಿಸಿಯೂಟದ ಅಡುಗೆ ಕೊಠಡಿಯು ದುರಸ್ತಿಯಲ್ಲಿದ್ದು, ಅಧಿಕಾರಿಗಳು ಈ ಕುರಿತಂತೆ ಬೇಗ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ಅಪಾಯ ಸಂಭವಿಸಿದರೂ ಆಶ್ಚರ್ಯವಿಲ್ಲ. ಅನಾಹುತಕ್ಕೆ ಅವಕಾಶವನ್ನು ಮಾಡಿಕೊಡದೆ ಅಧಿಕಾರಿಗಳು ಬೇಗ ಎಚ್ಚೆತ್ತುಕೊಂಡರೆ ಒಳಿತು” ಎಂದು ಎಚ್ಚರಿಸಿದರು.

WhatsApp Image 2025 07 21 at 7.22.23 PM 1

ಇದನ್ನೂ ಓದಿ: ಕೊಪ್ಪಳ | ಐತಿಹಾಸಿಕ ಸಾಧನೆಗೆ ಶಕ್ತಿ ಯೋಜನೆ ಸಾಕ್ಷಿ: ಶಾಸಕ ರಾಘವೇಂದ್ರ ಹಿಟ್ನಾಳ

“ಕೊಠಡಿ ಬಹುತೇಕ ಕಡೆಗಳಲ್ಲಿ ಬಿರುಕು ಬಿಟ್ಟಿದ್ದು, ಕೊಠಡಿ ಬಹುತೇಕ ಹಾಳಾಗಿದ್ದು, ಕಟ್ಟಡದ ಒಳಭಾಗ ನಿರಿನಿಂದ ತುಂಬಿಕೊಂಡಿದೆ. ಕೊಠಡಿಯಲ್ಲೆಲ್ಲ ಯಾವತ್ತು ಬಿದ್ದು ಅಪಾಯ ತಮಡೋತ್ತದೋ ಎಂಬ ಆತಂಕ ವಿದ್ಯಾರ್ಥಿಗಳ ಪಾಲಕರಲ್ಲಿ ಆವರಿಸಿದೆ. ಕಟ್ಟಡಕ್ಕೆ ಅಳವಡಿಸಿರುವ ವಿದ್ಯುತ್ ವೈರ್ ಕಿತ್ತು ಹೊರಗೆ ಬಂದಿವೆ. ಇದು ಇನ್ನೊಂದು ರೀತಿಯ ಅಪಾಯದ ಗುರುತಾಗಿದೆ. ಮಾಳಿಗೆಯ ಚತ್ತು ಉದುರಿ ಬೀಳುತ್ತಿದೆ. ಇದರಿಂದ ಯಾವಾಗ ಯಾವ ರೀತಿಯ ಅಪಾಯ ಕಾದಿದೆಯೋ ಹೇಳಲಾಗದು. ಅಪಾಯ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಬೇಕು” ಎಂದು ಬಿಸಿಯೂಟ ಅಧಿಕಾರಿ ಮಲ್ಲಿಕಾರ್ಜುನ ಗೌಡರವರಿಗೆ ಒತ್ತಾಯಿಸಿರದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X